Latest

ತಂದೆಯ ಶವ ಸಂಸ್ಕಾರಕ್ಕೆ ಹೂವು ತರಲು ಹೋದ ಮಗ ಸೇರಿ ಇಬ್ಬರು ಅಪಘಾತದಲ್ಲಿ ಸಾವು

ಪ್ರಗತಿವಾಹಿನಿ ಸುದ್ದಿ, ಶಿರಸಿ : ಸಾರಿಗೆ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನದ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿಯ ಎಸ್.ಬಿ.ಐ. ಸರ್ಕಲ್ ಬಳಿ ನಡೆದಿದೆ.
ಶಿರಸಿಯ ಗಣೇಶ ನಗರದ ರವಿಚಂದ್ರ ವಡ್ಡರ್ (34), ಸುನೀಲ ಇಂದೂರ (26) ಮೃತರು. ರವಿಚಂದ್ರ ಅವರ ತಂದೆ ಹನುಮಂತಪ್ಪ ಇಂದು ಮೃತಪಟ್ಟಿದ್ದು, ಅವರ ಶವಸಂಸ್ಕಾರಕ್ಕೆ ಹೂ ತರಲು ಇಬ್ಬರು ಮಾರುಕಟ್ಟೆಗೆ ತೆರಳುತ್ತಿದ್ದರು.
ಈ ವೇಳೆ ಇನ್ನೊಂದು ರಸ್ತೆಯಿಂದ ಬಂದ ಬಸ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಬಸ್ ಅಡಿಗೆ ಸಿಲುಕಿ ಸ್ಥಳದಲ್ಲೇ ಸಾವುಕಂಡಿದ್ದು ಶಿರಸಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button