EducationKarnataka NewsLatest
*ದ್ವಿತೀಯ ಪಿಯುಸಿ ಫಲಿತಾಂಶ ಮುಂದೂಡಿಕೆ*

ಪ್ರಗತಿವಾಹಿನಿ ಸುದ್ದಿ: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶಕ್ಕಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ನಿರಾಸೆ ಮೂಡಿಸಿದೆ. ಇಂದು ಪ್ರಕಟವಾಗಬೇಕಿದ್ದ ಫಲಿತಾಂಶ ಮುಂಡೂಡಿಕೆಯಾಗಿದೆ.
ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಬೇಕಿತ್ತು. ಆದರೆ, ಕೆಲ ಕಾರಣಾಂತರಗಳಿಂದ ಫಲಿತಾಂಶ ಪ್ರಕಟವಾಗುವುದಿಲ್ಲ. ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇನ್ನೆರಡು ದಿನ ವಿಳಂಬವಾಗುವ ಸಾಧ್ಯತೆಗಳಿವೆ.
ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (ಕೆಎಸ್ಇಎಬಿ) ಅಧ್ಯಕ್ಷ ಪ್ರಕಾಶ್ ನಿಟ್ಟಾಲಿ ಅವರು ಸ್ಪಷ್ಟಪಡಿಸಿದ್ದಾರೆ.




