Latest

*3 ದಿನಗಳ ಕೃಷಿ ಮೇಳ*

ಪ್ರಗತಿವಾಹಿನಿ ಸುದ್ದಿ, ಮೂಡಲಗಿ : ಪಟ್ಟಣದ ನವರಾತ್ರಿ ಉತ್ಸವ ಕಮೀಟಿಯಿಂದ ಅ.3ರಿಂದ ಜರಗುವು 9 ದಿನಗಳ ನವರಾತ್ರಿ ಉತ್ಸವದ ಅಂಗವಾಗಿ ಕೃಷಿ ಹಾಗೂ ತೋಟಗಾರಿಕೆ ಇಲಾಖೆ, ಕೃಷಿ ವಿಜ್ಞಾನ ಕೇಂದ್ರ ಬರ್ಡ್ಸ ತುಕ್ಕಾನಟ್ಟಿ ಹಾಗೂ ಶಿವಬೋಧರಂಗ ಪಿಕೆಪಿಎಸ್, ನಿಸರ್ಗ ಫೌಂಡೇಶನ್ ಮೂಡಲಗಿ ಇವುಗಳ ಸಹಯೋಗದೊಂದಿಗೆ ಕೃಷಿ ಮೇಳವನ್ನು ಅ. 5, 6, 7 ರಂದು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆ ಮೈದಾನದಲ್ಲಿ ದ್ವೀತಿಯ ಬಾರಿಗೆ ಆಯೋಜಿಸಲಾಗಿದೆ ಎಂದು ಉತ್ಸವ ಕಮೀಟಿಯ ಕೃಷ್ಣಾ ನಾಶಿ ಹೇಳಿದರು.

ಮೂಡಲಗಿ ಶಿಕ್ಷಣ ಸಂಸ್ಥೆ ಮೈದಾನದಲ್ಲಿ ಜರುಗಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತ ವರ್ಗಕ್ಕೆ ಉಪಯೋಗವಾಗುಂತ ಸಲಕರಣೆಗಳು, ಕೃಷಿ ಯಂತ್ರೋಪಕರಣಗಳು ಪ್ರದರ್ಶನ, ಸಾವಯುವ ಕೃಷಿ, ಸಿರಿಧಾನ್ಯಗಳ ಉತ್ಪಾದನೆ, ವಿಜ್ಞಾನ ವಸ್ತು ಪ್ರದರ್ಶನ, ಶ್ವಾನ ಪ್ರದರ್ಶನ, ಜಾನುವಾರುಗಳ ಪ್ರದರ್ಶನ, ಜೈವಿಕ ಗೊಬ್ಬರ ಹಾಗೂ ಪೀಡೆನಾಶಕ, ಜೇನು ಕೃಷಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಈ ಭಾಗದ ರೈತರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಕೃಷಿ ಮೇಳವನ್ನು ಆಯೋಜಿಸಲಾಗಿದೆ ಎಂದರು.
ಈರಪ್ಪ ಢವಳೇಶ್ವರ ಮಾತನಾಡಿ, ಕೃಷಿ ಮೇಳದಲ್ಲಿ ಉತ್ತಮ ರಾಸುಗಳ ಪ್ರದರ್ಶನ, ಕಿಲಾರಿ ಆಕಳ ಪ್ರದರ್ಶನ, ಟಗರಿನ ಕಾದಾಟ, ರಂಗೋಲಿ ಸ್ಪರ್ಧೆ, ಬಲೂನ್ ಸ್ಪರ್ಧೆ, ಕಣ್ಣು ಕಟ್ಟಿ ಮಡಿಕೆ ಒಡೆಯುವ ಸ್ಪರ್ಧೆ, ಬಾಳೆ ಹಣ್ಣು ತಿನ್ನುವ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದ್ದು, ತಾಲೂಕಿನ ಹಾಗೂ ವಿವಿಧ ಜಿಲ್ಲೆಗಳಿಂದ ರೈತಬಾಂಧವರು ಮೂರು ದಿನದ ಕೃಷಿ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದ್ವೀತಿಯ ಕೃಷಿ ಮೇಳವನ್ನು ಯಶಸ್ವಿಯಾಗಿಸಲು ಸಹಕರಿಸಬೇಕೆಂದು ಮತ್ತು ಹೆಚ್ಚಿನ ಮಾಹಿತಿಗಾಗಿ ಮೊ.9590718444, 9008846822ಗೆ ಸಂಪರ್ಕಿಸಿರಿ ಎಂದರು.

ಕುಮಾರ ಗಿರಡ್ಡಿ ಮತ್ತು ಜಗದೀಶ ತೇಲಿ ಮಾತನಾಡಿ, ಅ.3ರಿಂದ ನವರಾತ್ರಿ ಉತ್ಸವದ ವೇದಿಕೆಯಲ್ಲಿ ಪ್ರತಿ ವರ್ಷದಂತೆ ವಿವಿಧ ತರನಾದ ಸಂಸ್ಕೃತಿ ಕಾರ್ಯಕ್ರಮಗಳು, ದುರ್ಗಾ ಮಾತೆಯ ವಿವಿಧ ಪೂಜೆಗಳು ಸತತ 9 ದಿನಗಳ ಕಾಲ ಜರಗುತ್ತವೆ ಎಂದರು.
ಈ ಸಂದರ್ಭದಲ್ಲಿ ನವರಾತ್ರಿ ಉತ್ಸವ ಕಮೀಟಿಯ ಅಜ್ಜಪ್ಪ ಅಂಗಡಿ, ಹಣಮಂತ ಸತರಡ್ಡಿ, ಸದಾಶಿವ ನಿಡಗುಂದಿ, ಸಂಜು ಕಮತೆ, ಅಜ್ಜಪ್ಪ ಬಳಿಗಾರ, ಯಲ್ಲಪ್ಪ ಪೂಜೇರಿ, ಪ್ರಭು ತೇರದಾಳ, ಮಹೇಶ ಒಡೆಯರ್, ಅಜ್ಜಪ್ಪ ಜೀರಾಳೆ, ಬಸು ಅಂಗಡಿ, ಶ್ರೀರಂಗ ಜೋಶಿ, ಪ್ರದೀಪ ದೂರುರ, ಕಾಡಪ್ಪ ಮೇಳ್ಳಿಗೇರಿ, ಚೇತನ ನಿಶಾನಿಮಠ ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button