Kannada NewsKarnataka NewsLatest

*ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ; ದುಷ್ಕರ್ಮಿ ಬಂಧನ*

ಪ್ರಗತಿವಾಹಿನಿ ಸುದ್ದಿ: ಪರೀಕ್ಷೆ ಬರೆಯಲು ಬಂದಿದ್ದ ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಡಬ ಸರ್ಕಾರಿ ಕಾಲೇಜು ಆವರಣದಲ್ಲಿ ನಿಂತಿದ್ದ ಮೂವರು ವಿದ್ಯಾರ್ಥಿನಿಗಳ ಮೇಲೆ ದುಷ್ಕರ್ಮಿ ಮಾಸ್ಕ್, ಟೋಪಿ ಧರಿಸಿ ಬಂದು ಆಸಿಡ್ ದಾಳಿ ನಡೆಸಿ ಪರಾರಿಯಾಗಿದ್ದ. ದ್ವಿತೀಯ ಪಿಯು ಪರೀಕ್ಷೆಗೆಂದು ವಿದ್ಯಾರ್ಥಿನಿಯರು ಬಂದಿದ್ದರು. ಈ ವೇಳೆ ಈ ಘಟನೆ ನಡೆದಿದೆ.

ಇದೀಗ ಘಟನೆ ನಡೆದ ಒಂದು ಗಂಟೆಯಲ್ಲೇ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕೇರಳ ಮೂಲದ ಅಬೀನ್ ಬಂಧಿತ ಆರೋಪಿ.

ಇನ್ನು ಗಾಯಾಳು ವಿದ್ಯಾರ್ಥಿನಿಯರಲ್ಲಿ ಓರ್ವ ವಿದ್ಯಾರ್ಥಿನಿ ಸ್ಥಿತಿ ಗಂಭೀರವಾಗಿದ್ದು, ಮಂಗಳೂರು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

Home add -Advt


Related Articles

Back to top button