Kannada NewsKarnataka NewsLatest

*ಮೂವರು ವಿದ್ಯಾರ್ಥಿನಿಯರ ಮೇಲೆ ದುಷ್ಕರ್ಮಿಯಿಂದ ಆಸಿಡ್ ದಾಳಿ*

ಪ್ರಗತಿವಾಹಿನಿ ಸುದ್ದಿ: ಪರೀಕ್ಷೆ ಬರೆಯಲು ಆಗಮಿಸಿದ್ದ ಮೂವರು ವಿದ್ಯಾರ್ಥಿನಿಯರ ಮೇಲೆ ದುಷ್ಕರ್ಮಿಯೊಬ್ಬ ಆಸಿಡ್ ದಾಳಿ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಡಬ ಸರ್ಕಾರಿ ಕಾಲೇಜು ಆವರಣದಲ್ಲಿ ನಡೆದಿದೆ.

ದ್ವಿತೀಯ ಪಿಯುಸಿಯ ಮೂವರು ವಿದ್ಯಾರ್ಥಿನಿಯರ ಮೇಲೆ ದುಷ್ಕರ್ಮಿ ಆಸಿಡ್ ದಾಳಿ ನಡೆಸಿ ಪರಾರಿಯಾಗಿದ್ದಾನೆ. ಗಾಯಾಳು ವಿದ್ಯಾರ್ಥಿಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಳುಗಳಲ್ಲಿ ಓರ್ವ ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿದೆ. ಆರೋಪಿ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button