Kannada NewsKarnataka NewsLatest

*ಈಜಲು ತೆರಳಿದ್ದ ಮೂವರು SSLC ವಿದ್ಯಾರ್ಥಿಗಳು ನೀರುಪಾಲು*

ಪ್ರಗತಿವಾಹಿನಿ ಸುದ್ದಿ: ತುಂಗಾನದಿಯಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ನಡೆದಿದೆ.

ಮುವರು ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ತುಂಗಾನದಿಯಲ್ಲಿ ಈಜಲು ತೆರಳಿದ್ದರು. ಈ ವೇಳೆ ದುರಂತ ಸಂಭವಿಸಿದೆ. ಮೃತರನ್ನು ರಫನ್, ಇಯನ್ ಹಾಗೂ ಸಮ್ಮರ್
ಎಂದು ಗುರುತಿಸಲಾಗಿದೆ. ರಂಜಾನ್ ಉಪವಾಸ ಮುಗಿಸಿ ಬಳಿಕ ಈಜಲು ತೆರಳುದ್ದರು. ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ನೀರುಪಾಲಾಗಿದ್ದಾರೆ.

ತೀರ್ಥಹಳ್ಳಿಯ ತುಂಗಾ ನದಿಯ ರಾಮ ಮಂಟಪದ ಬಳಿ ಈ ದುರಂತ ಸಂಭವಿಸಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button