Latest

ಭಾರೀ ಮಳೆ‌ : ಸಿಎಂ ಗ್ರಾಮ ವಾಸ್ತವ್ಯ ಮುಂದೂಡಿಕೆ

ಪ್ರಗತಿವಾಹಿನಿ ಸುದ್ದಿ, ಕಲಬುರ್ಗಿ:

ಕಲಬುರಗಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದಿನಾಂಕ ೨೨ ರಂದು ಹೇರೂರ್ ( ಬಿ) ಗ್ರಾಮದಲ್ಲಿ ನಡೆಸಲು ಉದ್ದೇಶಿಸಲಾಗಿದ್ದ ಮುಖ್ಯಮಂತ್ರಿಗಳ ಜನತಾ ದರ್ಶನ ಹಾಗೂ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ಸನ್ಮಾನ್ಯ ಸಮಾಜಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ‌ ಸಚಿವ ಪ್ರಿಯಾಂಕ್ ಖರ್ಗೆ ಅವರು ತಿಳಿಸಿದ್ದಾರೆ‌.

ಮುಂದಿನ ಜನತಾ ದರ್ಶನ ಹಾಗೂ ಗ್ರಾಮ‌ವಾಸ್ತವ್ಯದ‌ ದಿನಾಂಕವನ್ನು ಸನ್ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಈ ಕುರಿತು ಜೂನ್ ೨೨ ರ ( ಶನಿವಾರ‌) ಬೆಳಿಗ್ಗೆ ೯ ಗಂಟೆಗೆ ಕಲಬುರಗಿ ನಗರದ ಐವಾನ್‌ ಇ ಶಾಹಿ ಅತಿಥಿ ಗೃಹದಲ್ಲಿ ಸಚಿವರು ಪತ್ರಿಕಾಗೋಷ್ಟಿ‌ ನಡೆಸಲಿದ್ದಾರೆ.

Home add -Advt

Related Articles

Back to top button