Kannada NewsKarnataka News

*ಕಣ್ಣಿಗೆ ಖಾರದ ಪುಡಿ ಎರಚಿ 32 ಲಕ್ಷ ದರೋಡೆ ಪ್ರಕರಣ: ಚಾಲಕನ ಕೈವಾಡ ಬಯಲು*

ಪ್ರಗತಿವಾಹಿನಿ ಸುದ್ದಿ: ಕಣ್ಣಿಗೆ ಖಾರದ ಪುಡಿ ಎರಚಿ 32 ಲಕ್ಷ ರೂ. ಹಣವನ್ನು ದರೋಡೆ ಮಾಡಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.‌

ಇತ್ತೀಚೆಗೆ ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಹೊರವಲಯದಲ್ಲಿ ಕ್ಯಾಂಟರ್‌ ಅಡ್ಡಗಟ್ಟಿ, ಚಾಲಕ ಹಾಗೂ ನಿರ್ವಾಹಕನ ಮೇಲೆ ಹಲ್ಲೆ ನಡೆಸಿ 32ಲಕ್ಷ ದರೋಡೆ ಮಾಡಿದರು. ಈ ಪ್ರಕರಣದಲ್ಲಿ ಕ್ಯಾಂಟರ್‌ ಚಾಲಕನ ಕೈವಾಡವಿರುವುದು ಬೆಳಕಿಗೆ ಬಂದಿದೆ.

ಮೇ 18ರಂದು ಜೇವರ್ಗಿಯ ಹತ್ತಿ ವ್ಯಾಪಾರಿ ಚಂದ್ರಕಾಂತ್ ಕುಂಬಾರ ಎಂಬವರಿಗೆ ಸೇರಿದ ಹತ್ತಿಯನ್ನು ಧಾರವಾಡದಲ್ಲಿ ಮಾರಾಟ ಮಾಡಿ ವಾಪಸ್ ಹಣ ತೆಗೆದುಕೊಂಡು ಹೋಗುತ್ತಿದ್ದ ವೇಳೆ ಈ ದರೋಡೆ ನಡೆದಿತ್ತು. ವಿಚಾರಣೆ ವೇಳೆ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದೆ. ಚಾಲಕನೂ ಕೃತ್ಯದಲ್ಲಿ ಭಾಗಿಯಾಗಿದ್ದಾನೆ ಎಂಬುದು ತಿಳಿದುಬಂದಿದೆ. ಕ್ಯಾಂಟರ್‌ ಚಾಲಕನನ್ನು ವಿಚಾರಣೆಗೆ ಒಳಪಡಿಸಿದಾಗ ದರೋಡೆ ಹಿಂದಿನ ಸಂಚು ಬಯಲಾಗಿದೆ.

ಈ ಸಂಬಂಧ ವಿಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ,‌ ಬಂಧಿತರಿಂದ ಕೃತ್ಯಕ್ಕೆ ಬಳಸಿದ ವಾಹನ, ಬಡಿಗೆ, ರಾಡ್ ಹಾಗೂ 31,04,364 ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ.


https://pragativahini.com/cms-video-conversation-with-district-collectors-dc-nitesh-patil-instructs-for-adequate-distribution-of-sowing-seed-manure/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button