Kannada NewsKarnataka NewsLatest

*ಈಜಲು ಹೋಗಿ ದುರಂತ ಅಂತ್ಯ; ಕಾವೇರಿ ನದಿಯಲ್ಲಿ ಮುಳುಗಿ ನಾಲ್ವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಪ್ರವಾಸಕ್ಕೆಂದು ಬಂದು ಈಜಲು ಹೋಗಿದ್ದ ವೇಳೆ ದುರಂತ ಸಂಭವಿಸಿ ನಾಲ್ವರು ಕಾವೇರಿ ನದಿ ನೀರುಪಾಲಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ನಡೆದಿದೆ.

ಮೈಸೂರಿನಿಂದ ಕುಟುಂಬಸ್ಥರು, ಸ್ನೇಹಿತರು ಸೇರಿದಂತೆ 40 ಜನರು ಬಸ್ ನಲ್ಲಿ ಪ್ರವಾಸಕ್ಕೆಂದು ಬಂದಿದ್ದರು. ಈ ವೇಳೆ ಕಾವೇರಿ ನದಿಯಲ್ಲಿ ಓರ್ವ ಈಜಲು ತೆರಳಿದ್ದ. ಆತ ನೀರಿನಲ್ಲಿ ಮುಳುಗುತ್ತಿರುವುದು ಕಂಡು ಆತನನ್ನು ರಕ್ಷಿಸಲೆಂದು ಹೋದ ಮೂವರು ಕೂಡ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಒಟ್ಟು ನಾಲ್ವರು ಕಾವೇರಿ ನದಿ ಪಾಲಾಗಿ ಸಾವನ್ನಪ್ಪಿದ್ದಾರೆ.

Home add -Advt

ನಾಗೇಶ್ (40), ಭರತ್ (17), ಗುರು (32), ಮಹದೇವ್ (16) ಮೃತರು. ಇಬ್ಬರ ಮೃತದೇಹ ಪತ್ತೆಯಾಗಿದ್ದು, ಇನ್ನಿಬ್ಬರ ಮೃತದೇಹಕಾಗಿ ಪೊಲೀಸರು ಹಾಗೂ ಅಗ್ನಿಶಮಕ ಸಿಬ್ಬಂದಿ ನದಿಯಲ್ಲಿ ಶೋಧ ನಡೆಸಿದ್ದಾರೆ.


Related Articles

Back to top button