GIT add 2024-1
Laxmi Tai add
Beereshwara 33

5 ಜಿಲ್ಲೆಗಳಲ್ಲಿ ಒಮಿಕ್ರಾನ್ ಅಟ್ಟಹಾಸ; ವ್ಯಾಕ್ಸಿನ್ ಪಡೆಯದಿದ್ದರೆ ಜೀವಕ್ಕೆ ತೊಂದರೆ; ಎಚ್ಚರಿಕೆ ನೀಡಿದ ಆರೋಗ್ಯ ಸಚಿವ

ಮಧ್ಯಾಹ್ನ ಹಿರಿಯ ಅಧಿಕಾರಿಗಳ ಮಹತ್ವದ ಸಭೆ

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹಾಗೂ ರೂಪಾಂತರಿ ವೈರಸ್ ಒಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿವೆ. ಲಸಿಕೆ ಪಡೆಯದವರ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ರಾಜ್ಯದ 5 ಜಿಲ್ಲೆಗಳಲ್ಲಿ ಒಮಿಕ್ರಾನ್ ಪ್ರಕರಣ ಕಂಟಕವಾಗುತ್ತಿದೆ. ಬೆಂಗಳೂರು, ಮಂಡ್ಯ, ಮೈಸೂರು, ಉಡುಪಿ, ಕೋಲಾರ ಜಿಲ್ಲೆಗಳಲ್ಲಿ ಸೋಂಕು ಹೆಚ್ಚುತ್ತಿದೆ. 2 ಡೋಸ್ ಲಸಿಕೆ ಪಡೆಯದವರ ಮೇಲೆ ಪರಿಣಾಮ ಬೀರುತ್ತಿದೆ. ವ್ಯಾಕ್ಸಿನೇಷನ್ ಪಡೆದುಕೊಳ್ಳದಿದ್ದರೆ ಜೀವಕ್ಕೆ ತೊಂದರೆಯಾಗಬಹುದು. ಹಾಗಾಗಿ ನಿರ್ಲಕ್ಷ ಮಾಡದೇ ಎಲ್ಲರೂ 2 ಡೋಸ್ ಲಸಿಕೆ ಪಡೆಯಿರಿ ಎಂದರು.

Emergency Service

ಒಮಿಕ್ರಾನ್, 3ನೇ ಅಲೆ ವೇಗವಾಗಿ ಹರಡುತ್ತಿದೆ. ಕೇಸ್ ಹೆಚ್ಚಾಗುವುದನ್ನು ತಡೆಯಲು ಸಾಧ್ಯವೇ ಇಲ್ಲ. ಆದರೆ ಲಸಿಕೆ ಪಡೆಯುವುದರಿಂದ ಸಾವು-ನೋವನ್ನು ತಪ್ಪಿಸಬಹುದು. ನಿನ್ನೆ ಒಂದೇ ದಿನ ಪಾಸಿಟಿವಿಟಿ ರೇಟ್ 3.95ರಷ್ಟಾಗಿದೆ. ಜನರು ಸ್ವತ: ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದರು.

ಮಧ್ಯಾಹ್ನ ಹಿರಿಯ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಯಲಿದೆ. ಕೊರೊನಾ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಇನ್ನಷ್ಟು ನಿಯಮಗಳಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದರು.

ಮಹಿಳಾ ತಹಶೀಲ್ದಾರ್, ಗ್ರಾಮ ಲೆಕ್ಕಿಗ ಎಸಿಬಿ ಬಲೆಗೆ

Bottom Add3
Bottom Ad 2