Latest

ಮೂರೇ ದಿನಕ್ಕೆ ಮೊಟಕುಗೊಳ್ಳುತ್ತಾ ಅಧಿವೇಶನ…?

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದಿನಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಆದರೆ ಕೊರೊನಾ ಸೋಂಕಿನ ಕಾರಣಕ್ಕೆ ಅಧಿವೇಶನವನ್ನು ಮೂರೇ ದಿನಕ್ಕೆ ಮೊಟಕುಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, 60-70 ಶಾಸಕರು ಕೊರೊನಾ ಸೋಂಕಿನಿಂದ ಬಳಲುತ್ತಿದ್ದಾರೆ. ಹಲವರು ಹೋಂ ಐಸೋಲೇಷನ್ ನಲ್ಲಿ ಇದ್ದಾರೆ. ಹೀಗಾಗಿ ಅಧಿವೇಶನವನ್ನು ಮೊಟಕುಗೊಳಿಸುವ ಬಗ್ಗೆ ಯೋಚಿಸಲಾಗುತ್ತಿದೆ ಎಂದರು.

Home add -Advt

ಅಧಿವೇಶನ ಮೊಟಕುಗೊಳಿಸುವ ಬಗ್ಗೆ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಚರ್ಚಿಸಿ, ವಿಪಕ್ಷಗಳ ಅಭಿಪ್ರಾಯವನ್ನು ಪಡೆದು ನಿರ್ಧರಿಸಲಾಗುವುದು ಎಂದು ಹೇಳಿದರು.

ಸಚಿವ ಸಂಪುಟ ವಿಸ್ತರಣೆ ಕುರಿತು ವರಿಷ್ಠರ ಸೂಚನೆಗಾಗಿ ಕಾಯುತ್ತಿದ್ದೇನೆ. ಹೈಕಮಾಂಡ್ ನಿಂದ ಈ ವರೆಗೆ ಯಾವುದೇ ಸೂಚನೆ ಬಂದಿಲ್ಲ. ವರಿಷ್ಠರು ಸೂಚಿಸಿದ ಬಳಿಕ ಸಂಪುಟ ವಿಸ್ತರಣೆ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿಸಿದರು.

Related Articles

Back to top button