
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಇತ್ತೀಚಿಗೆ ಸಾರ್ವಜನಿಕರು ಮಾರಿಹಾಳ ಪೊಲೀಸ್ ಠಾಣೆಗೆ ನೀಡಿದ ಖಚಿತ ಮಾಹಿತಿ ಆಧಾರದಿಂದ 1 ಟ್ರಕ್ ಗೋವುಗಳ ಹಾಗೂ ಎಮ್ಮೆಗಳ ಚರ್ಮ ವಶಪಡಿಸಿಕೊಂಡ ಹಿನ್ನೆಲೆಯಲ್ಲಿ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಬುಧವಾರ ಮಾರಿಹಾಳ ಪೊಲೀಸ್ ಠಾಣೆಗೆ ಭೇಟಿ ನೀಡಿ ಪ್ರಕರಣದ ಸಂಪೂರ್ಣ ಮಾಹಿತಿ ಪಡೆದರು.

ಇದೊಂದು ದೊಡ್ಡ ಜಾಲವಿದ್ದು ಗೋವುಗಳ ಹತ್ಯೆ ನಿಷೇಧವಿದ್ದರೂ ಇಷ್ಟೊಂದು ಪ್ರಮಾಣದ ಹತ್ಯೆ ನಡೆದಿರುವುದರ ಬಗ್ಗೆ ತನಿಖೆ ನಡೆಸಿ ಹತ್ಯೆಯ ಹಿಂದಿರುವ ತಪ್ಪಿತಸ್ಥರ ವಿರುದ್ಧ ಯಾವುದೇ ಮುಲಾಜಿಲ್ಲದೆ ಪ್ರಕರಣ ದಾಖಲಿಸಿ ಶಿಕ್ಷೆಗೆ ಗುರಿಪಡಿಸುವಂತೆ ಪೊಲೀಸರಿಗೆ ಸಚಿವರು ಸೂಚಿಸಿದ್ದಾರೆ.
ಈ ಸಂದರ್ಭದಲ್ಲಿ ಶಾಸಕ ಅನಿಲ್ ಬೆನಕೆ, ಬೆಳಗಾವಿ ಗ್ರಾಮಾಂತರ ಬಿಜೆಪಿ ಜಿಲ್ಲಾ ಅಧ್ಯಕ್ಷ ಸಂಜಯ್ ಪಾಟೀಲ್, ಬಜರಂಗದಳದ ಕಾರ್ಯಕರ್ತರು ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಇದ್ದರು.