Latest

ವಿಶ್ವ ವಿದ್ಯಾಲಯಗಳ ಪರೀಕ್ಷೆ ಮುಂದೂಡಿಕೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಭಾರತ್ ಬಂದ್ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಸಾರಿಗೆ ಸಂಚಾರಕ್ಕೆ ಅಡ್ಡಿಯುಂತಾಗಿದೆ. ಈ ಹಿನ್ನೆಯಲ್ಲಿ ಕರ್ನಾಟಕ ವಿಶ್ವ ವಿದ್ಯಾಲಯದಿಂದ ಇಂದು ನಡೆಯಬೇಕಿದ್ದ ಹಲವು ಪರೀಕ್ಷೆಗಳನ್ನು ಮುಂದೂಡಲಾಗಿದೆ.

ರಾಜ್ಯಾದ್ಯಂತ ರೈತರು ಪ್ರತಿಭಟನೆ ನಡೆಸುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಬಸ್ ಸಂಚಾರವಿಲ್ಲದೇ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿವಿ ಪರೀಕ್ಷೆ ಮುಂದೂಡಾಗಿದೆ.

Home add -Advt

ವಿಜಯನಗರ ಶ್ರೀ ಕೃಷ್ಣದೇವರಾಯ ವಿವಿ, ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯ, ಬೆಂಗಳೂರು ವಿವಿಯ ಪದವಿ, ಸ್ನಾತಕೋತ್ತರ, Bed ಸೇರಿದಂತೆ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಭಾರತ್ ಬಂದ್; ಬೆಳಗಾವಿಯಲ್ಲಿ ಟೈಯರ್ ಗೆ ಬೆಂಕಿ ಹಚ್ಚಿ ರೈತರ ಆಕ್ರೋಶ

Related Articles

Back to top button