Belagavi NewsBelgaum NewsKannada NewsKarnataka News

6 ಲಕ್ಷ ರೂ. ಪರಿಹಾರ : ಚೆಕ್ ಹಸ್ತಾಂತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವಿದ್ಯುತ್ ಪ್ರವಹಿಸಿ ಮೂವರು ಮೃತಪಟ್ಟಿದ್ದ ಶಾಹುನಗರದ ಕುಟುಂಬಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 6 ಲಕ್ಷ ರೂ. ಪರಿಹಾರ ಬಿಡುಗಡೆ ಮಾಡಿಸಿದ್ದಾರೆ.

ಕುಟುಂಬದ ಸದಸ್ಯರಿಗೆ ಮಂಗಳವಾರ ಸಚಿವರು ಚೆಕ್ ನೀಡಿದರು. ಬೆಳಗಾವಿಯ ಶಾಹುನಗರದಲ್ಲಿ ಕಳೆದ ವರ್ಷ ಮನೆಯಲ್ಲಿ‌ ನೀರು ಕಾಯಿಸುವ ಯಂತ್ರದಿಂದ ವಿದ್ಯುತ್ ಪ್ರವಹಿಸಿ ಮೂವರು ಮೃತಪಟ್ಟಿದ್ದರು.

  ಈರಪ್ಪ ಗ ರಾಠೋಡ್, ಶಾಂತವ್ವ ಈ ರಾಠೋಡ್ ಹಾಗೂ ಅನ್ನಪೂರ್ಣ ಅ ರಾಠೋಡ್ ಸ್ಥಳದಲ್ಲಿಯೇ ಮೃತಪಟ್ಟ ಹಿನ್ನೆಲೆಯಲ್ಲಿ, ಮೃತರ ಕುಟುಂಬದವರು ಬಡವರಾಗಿರುವ ಕಾರಣ ಆ ಕುಟುಂಬದವರಿಗೆ ಸಚಿವರು ವಿಶೇಷ ಪ್ರಯತ್ನದ ಮೂಲಕ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 6 ಲಕ್ಷ ರೂ,ಗಳನ್ನು ಮಂಜೂರು ಮಾಡಿಸಿದ್ದಾರೆ.

ಅವರಿಗೆ ಚೆಕ್ ಹಸ್ತಾಂತರಿಸಲಾಯಿತು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button