Latest
*ಕೂಡಲಸಂಗಮಕ್ಕೆ ಆಗಮಿಸಿದ ರಾಹುಲ್ ಗಾಂಧಿ; ಕಾಂಗ್ರೆಸ್ ನಾಯಕನ ಹೆಲಿಕಾಪ್ಟರ್ ಪರಿಶೀಲಿಸಿದ ಚುನಾವಣಾಧಿಕಾರಿಗಳು*

ಪ್ರಗತಿವಾಹಿನಿ ಸುದ್ದಿ; ಬಾಗಲಕೋಟೆ: ಬಾಗಲಕೊಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮಕ್ಕೆ ಕಾಂಗೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ.

ಬಸವ ಜಯಂತಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಕೂಡಲಸಂಗಮಕ್ಕೆ ಆಗಮಿಸಿದ್ದು, ಬಸವಣ್ಣನವರ ಐಕ್ಯ ಸ್ಥಳ, ಸಂಗಮೇಶ್ವರ ದೇವಾಲಯಗಳಿಗೆ ಭೇಟಿ ನೀಡಿದರು.
ಇದಕ್ಕೂ ಮುನ್ನ ರಾಹುಲ್ ಗಾಂಧಿ ಹುಬ್ಬಳ್ಳಿಯಿಂದ ಹುನಗುಂದ ಹೆಲಿಪ್ಯಾಡ್ ಗೆ ಬಂದಿಳಿಯುತ್ತಿದ್ದಂತೆ ಚುನಾವಣಾಧಿಕಾರಿಗಳು ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್ ನ್ನು ತಪಾಸಣೆ ನಡೆಸಿ ಪರಿಶೀಲನೆ ನಡೆಸಿದರು.




