Kannada NewsKarnataka NewsLatest

*ತಂಗಿಯ 6 ವರ್ಷದ ಮಗುವನ್ನೇ ಕೊಂದ ಅಕ್ಕ*

ಪ್ರಗತಿವಾಹಿನಿ ಸುದ್ದಿ; ಚಿಕ್ಕಬಳ್ಳಾಪುರ: ಇತ್ತೀಚೆಗೆ 9 ತಿಂಗಳ ಮಗುವನ್ನು ಅಜ್ಜಿಯೇ ಕೊಲೆ ಮಾಡಿದ್ದ ಘಟನೆ ಗದಗದಲ್ಲಿ ಬೆಳಕಿಗೆ ಬಂದಿತ್ತು. ಈ ಘಟನೆ ಬೆನ್ನಲ್ಲೇ ಇದೀಗ ಚಿಕ್ಕಬಳ್ಳಾಪುರದಲ್ಲಿ 6 ವರ್ಷದ ಮಗುವನ್ನು ದೊಡ್ಡಮ್ಮನೇ ಹತ್ಯೆಗೈದಿರುವ ಘಟನೆ ನಡೆದಿದೆ.

ಮುತಕದಹಳ್ಳಿ ಗ್ರಾಮದಲ್ಲಿ ಮಹಿಳೆಯೊಬ್ಬರು ತನ್ನ ತಂಗಿಯ 6 ವರ್ಷದ ಮಗನನ್ನೇ ಕೊಲೆ ಮಾಡಿದ್ದಾರೆ. ಅಂಬಿಕಾ ಮಗುವನ್ನು ಕೊಂದ ಆರೋಪಿ.

ಅಂಬಿಕಾ ಹಾಗೂ ಅನಿತಾ ಅಕ್ಕ ತಂಗಿಯರು. ಅಂಬಿಕಾ ಅನೈತಿಕ ಸಂಬಂಧದ ಬಗ್ಗೆ ಅನಿತಾಗೆ ಗೊತ್ತಾಗಿ, ಇದಕ್ಕೆ ಅನಿತಾ ವಿರೋಧ ವ್ಯಕ್ತಪಡಿಸಿದ್ದಳು. ಅಕ್ಕನಿಗೆ ಬುದ್ಧಿ ಹೇಳಿದ್ದಳು. ಇದರಿಂದ ಕೋಪಗೊಂಡ ಅಕ್ಕ ಅಂಬಿಕಾ, ಅನಿತಾಳ 6 ವರ್ಷದ ಮಗುವನ್ನು ಕೊಲೆಗೈದು ಮುತಕದಹಳ್ಳಿ ಗ್ರಾಮದ ಮಾವಿನ ತೋಪಿನಲ್ಲಿ ಹೂತು ಹಾಕಿದ್ದಾಳೆ.

ಈ ಬಗ್ಗೆ ಮಾಹಿತಿ ನೀಡಿರುವ ಎಸ್ ಪಿ ಡಿ.ಎಲ್.ನಾಗೇಶ್,ತನ್ನಿಬ್ಬರು ಮಕ್ಕಳು ಕಾಣೆಯಾಗಿದ್ದಾರೆ ಎಂದು ಅನಿತಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಅಲ್ಲದೇ ಸ್ವಂತ ಅಕ್ಕ ಅಂಬಿಕಾ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿ ಪತ್ತೆಗಾಗಿ ತನಿಖೆ ನಡೆಸಲಾಗಿತ್ತು. ನಿನ್ನೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಂಬಿಕಾರನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಮಗುವನ್ನು ಕೊಂದ ವಿಚಾರ ಬಯಲಾಗಿದೆ ಎಂದು ತಿಳಿಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button