Kannada NewsKarnataka NewsLatest

*ಕೆಮ್ಮು-ಕಫದಿಂದ ಬಳಲಿ ಆಸ್ಪತ್ರೆಗೆ ದಾಖಲಾಗಿದ್ದ 6 ವರ್ಷದ ಬಾಲಕಿ ಸಾವು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ತೀವ್ರ ಕೆಮ್ಮು, ಕಫದಿಂದ ಬಳಲಿ ಆಸ್ಪತ್ರೆಗೆ ದಾಖಲಾಗಿದ್ದ 6 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ಆಕಾಶ್ ಆಸ್ಪತ್ರೆಯಲ್ಲಿ ನಡೆದಿದೆ.

6 ವರ್ಷದ ರಾಬಿಯಾ ಮೃತ ಬಾಲಕಿ. ದೇವನಹಳ್ಳಿಯ ವಿಜಯಪುರದ ದಾದಾಫಿರ್, ನಜಿಯಾ ಬಾನು ದಂಪತಿಯ ಪುತ್ರಿ. ಕೆಮ್ಮು ಹಾಗೂ ಕಫದಿಂದ ಬಳಲುತ್ತಿದ್ದ ಬಾಲಕಿಯನ್ನು ಆಕಾಶ್ ಆಸ್ಪತ್ರೆ ದಾಖಲಿಸಲಾಗಿತ್ತು. ಮೂರು ದಿನ ಜನರಲ್ ವಾರ್ಡ್ ನಲ್ಲಿಯೇ ಬಾಲಕಿಗೆ ಚಿಕಿತ್ಸೆ ನೀಡಲಾಗಿತ್ತು.

Home add -Advt

ಆದರೆ ನಿನ್ನೆ ಸಂಜೆ ಬಾಲಕಿಯನ್ನು ಐಸಿಯುಗೆ ಶಿಫ್ಟ್ ಮಾಡಲಾಗಿತ್ತು. ಐಸಿಯುಗೆ ಶಿಫ್ಟ್ ಆದ ಮೂರೇ ಗಂಟೆಯಲ್ಲಿ ಬಾಲಕಿ ಸಾವನ್ನಪ್ಪಿದ್ದಾಳೆ . ವೈದ್ಯರ ನಿರ್ಲಕ್ಷ್ಯವೇ ಬಾಲಕಿ ಸಾವಿಗೆ ಕಾರಣ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


Related Articles

Back to top button