*ದೇವಸ್ಥಾನದಲ್ಲಿ ಪ್ರಸಾದ ಸೇವಿಸಿದ್ದ 600 ಜನರು ಅಸ್ವಸ್ಥ*

ಪ್ರಗತಿವಾಹಿನಿ ಸುದ್ದಿ: ದೇವಸ್ಥಾನದಲ್ಲಿ ಪ್ರಸಾದ ಸೇವಿಸಿದ್ದ ಸುಮಾರು 600 ಜನರು ಅಸ್ವಸ್ಥರಾಗಿರುವ ಘಟನೆ ಮಹಾರಾಷ್ಟ್ರದ ಲೋನಾರ್ ನಲ್ಲಿ ನಡೆದಿದೆ. ವರದಿಗಳ ಪ್ರಕಾರ ಬುಲ್ದಾನ ಜಿಲ್ಲೆಯ ಲೋನಾರ್ ತಾಲೂಕಿನ ಖಪರ್ ಖೇಡಾ ದೇವಸ್ಥಾನದಲ್ಲಿ ಪ್ರಸಾದ ಸೇವಿಸಿದ್ದವರಲ್ಲಿ 600 ಜನರು ತೀವ್ರ ಅಸ್ವಸ್ಥರಾಗಿದ್ದು ಹಲವು ಆಸ್ಪತ್ರೆಗೆ ದಾಖಲಾಗಿದ್ದಾರೆ.Home add -Advt ದೇವಸ್ಥಾನದಲ್ಲಿ ಪ್ರಸಾದ ಸೇವಿಸಿದ ಕೆಲ ಸಮಯದಲ್ಲೇ ಕೆಲವರಿಗೆ ವಾಂತಿ ಭೇದಿ ಶುರುವಾಗಿ ಅಸ್ವಸ್ಥರಾಗಿದ್ದಾರೆ. ಫುಡ್ ಪಾಯಿಸನ್ ನಿಂದ ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ. *ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಸಸ್ಪೆಂಡ್*