Karnataka News

ಎನ್‌ಆರ್‌ಇಜಿಎಸ್ ಅಡಿಯಲ್ಲಿ ಕರ್ನಾಟಕಕ್ಕೆ ಬಿಡುಗಡೆಯಾದ ಮೊತ್ತವೆಷ್ಟು ಗೊತ್ತೇ?

ಪ್ರಗತಿವಾಹಿನಿ ಸುದ್ದಿ, ನವದೆಹಲಿ :   ಎನ್‌ಆರ್‌ಇಜಿಎಸ್ ಅಡಿಯಲಿ ೨೦೨೧-೨೨ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮೊತ್ತ ಬಿಡುಗಡೆ ಬಗ್ಗೆ ನವದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ ಅಧಿವೇಶನದಲ್ಲಿ ಚಿಕ್ಕೋಡಿ ಲೋಕಸಭಾ ಸದಸ್ಯ ಅಣ್ಣಾಸಾಹೇಬ ಜೊಲ್ಲೆಯವರ ಪ್ರಶ್ನೆಗೆ ಗ್ರಾಮೀಣಾಭಿವೃದ್ದಿ ರಾಜ್ಯ ಸಚಿವ ಸಾಧ್ವಿ ನಿರಂಜನ್ ಜ್ಯೋತಿ ರವರು ಮಂಗಳವಾರ ಉತ್ತರಿಸಿದ್ದಾರೆ.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಎನ್‌ಆರ್‌ಇಜಿಎಸ್) ಬೇಡಿಕೆ ಚಾಲಿತ ಕೂಲಿ ಉದ್ಯೋಗ ಯೋಜನೆಯಾಗಿದ್ದು. ಎಲ್ಲ ರಾಜ್ಯಗಳಿಗೆ ಯೋಜನೆಯನ್ನು ಜಾರಿಗೆ ತರಲಾಗಿದೆ. ೨೦೨೧-೨೨ನೇ ಹಣಕಾಸು ವರ್ಷದಲ್ಲಿ ಈ ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯಕ್ಕೆ ರೂ. ೬,೦೨೮.೦೭ ಕೋಟಿ ಮೊತ್ತ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Home add -Advt

ಗ್ರಾಮ ಪಂಚಾಯತಿ ಉಪ ಚುನಾವಣೆ: ಅಧಿಸೂಚನೆ ಪ್ರಕಟ
.

 

https://pragati.taskdun.com/gram-panchayat-bye-election-notification-published/

Related Articles

Back to top button