*ಪಲ್ಟಿಯಾದ ವಾಹನದಲ್ಲಿ 7 ಕೋಟಿ ಹಣ ಪತ್ತೆ*

ಪ್ರಗತಿವಾಹಿನಿ ಸುದ್ದಿ: ವಿಜಯವಾಡದಿಂದ ವಿಶಾಖಪಟ್ಟಣಂಗೆ ತೆರಳುತ್ತಿದ್ದ ವಾಹನ ಅನಂತಪಲ್ಲಿಯ ಬಳಿ ಪಲ್ಟಿಯಾಗಿ ಬಿದ್ದಿದೆ. ಅಪಘಾತ ಕಂಡು ಸಾರ್ವಜನಿಕರು ರಕ್ಷಣೆಗೆ ಬಂದಿದ್ದು, ಈ ವೇಳೆ ವಾಹನದಲ್ಲಿ 7 ಕೋಟಿ ಹಣವಿರುವುದು ಪತ್ತೆಯಾಗಿದೆ. ಚುನಾವಣಾ ಕಣವಾಗಿರುವ ಆಂಧ್ರಪ್ರದೇಶದಲ್ಲಿ ದೊಡ್ಡ ಮೊತ್ತದ ಹಣ ಸಾಗಾಟ ಪ್ರಕರಣ ಬೆಳಕಿಗೆ ಬಂದಿದೆ. ಈ ಘಟನೆ ಸಂಬಂಧ ಪೂರ್ವ ಗೋದಾವರಿ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು , ಪೊಲೀಸರು 7 ಕೋಟಿ ವಶಕ್ಕೆ ಪಡೆದಿದ್ದು, ತನಿಖೆ ಆರಂಭಿಸಿದ್ದಾರೆ. *ಪೊದೆಯಲ್ಲಿ ಪತ್ತೆಯಾಯ್ತು ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಯ ರುಂಡ*