Kannada NewsKarnataka NewsLatest

*ಅಂಗಳದಲ್ಲಿದ್ದ ಗೇಟ್ ಮುರಿದು ಬಿದ್ದು ಬಾಲಕಿ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಮನೆಯಂಗದಲ್ಲಿದ್ದ ಗೇಟ್ ಮುರಿದುಬಿದ್ದು ಬಾಲಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ.

ಇಲ್ಲಿನ ವಾಜರಹಳ್ಳಿಯಲ್ಲಿ ಈ ದುರಂತ ಸಂಭವಿಸಿದೆ. 7 ವರ್ಷದ ಬಾಲಕಿ ಯಲ್ಲಮ್ಮ ಮೃತ ದುರ್ದೈವಿ. ರಾಯಚೂರು ಮೂಲದ ಮಂಕಪ್ಪ-ಮಲ್ಲಮ್ಮ ದಂಪತಿಯ ಪುತ್ರಿ.

ಮನೆಯಂಗದಲ್ಲಿದ್ದ ಗೇಟ್ ಹತ್ತಿ ಆಟವಾಡುತ್ತಿದ್ದಾಗ ಗೇಟ್ ಏಕಾಏಕಿ ಮುರಿದು ಬಿದ್ದಿದೆ. ಗೇಟ್ ಅಡಿಗೆ ಸಿಲುಕಿದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Related Articles

Back to top button