EducationKarnataka NewsLatest

*8 ಕಾಲೇಜುಗಳ ಮೇಲೆ ವಾಣಿಜ್ಯ ತೆರಿಗೆ ಅಧಿಕಾರಿಗಳ ದಿಢೀರ್ ದಾಳಿ*

ಪ್ರಗತಿವಾಹಿನಿ ಸುದ್ದಿ: ಜಿಎಸ್ ಟಿ ವಂಚನೆ ಆರೋಪ ಹಿನ್ನೆಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಅವಳಿ ನಗರದ 8 ಕಾಲೇಜುಗಳ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.

ಧಾರವಾಡದ ಅಣ್ಣಿಗೇರಿ ಕಾಲೇಜು, ಮಹೇಶ ಪಿಯು ಕಾಲೇಜು, ಪ್ರೇರಣಾ ಕಾಲೇಜು, ಜಿಎಸ್ ಎಸ್ ಆವಂತಿಕಾ ಕೋಚಿಂಗ್ ಸೆಂಟರ್, ಚೇತನಾ ಪಿಯು ಕಾಲೇಜು ಸೇರಿದಂತೆ 8 ಕಾಲೇಜುಗಳ ಮೇಲೆ ದಾಳಿ ನಡೆಸಲಾಗಿದೆ.

ಕೋಚಿಂಗ್ ಹೆಸರಲ್ಲಿ ವಿವಿಧ ಪರೀಕ್ಷೆಗಳಿಗಾಗಿ ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ಹಣಕ್ಕೆ ಜಿಎಸ್ ಟಿ ಕಟ್ಟದೆ ವಂಚನೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಜಾರಿ ವಿಭಾಗದ ಜಂಟಿ ಆಯುಕ್ತ ರವಿಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.


Related Articles

Back to top button