Kannada NewsKarnataka NewsLatest
ಆರ್ಸಿಯುನಿಂದ ಸಿಎಂ ಪರಿಹಾರ ನಿಧಿಗೆ 8 ಲಕ್ಷ ರೂ.

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೋವಿಡ್-೧೯ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳ ಒಂದು ದಿನದ ವೇತನ ನೀಡಲಾಯಿತು.
8.29 ಲಕ್ಷ ರೂ.ಗಳ ಡಿಡಿಯನ್ನು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಂ. ರಾಮಚಂದ್ರ ಗೌಡ ಅವರು ಮಾನ್ಯ ಮುಖ್ಯಮಂತ್ರಿಯವರಿಗೆ ಹಸ್ಥಾಂತರಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ ಹಾಗೂ ವಿಶ್ವವಿದ್ಯಾಲಯದ ವಿಶೇಷಾಧಿಕಾರಿ ಡಾ.ಎ. ಜಯಪ್ಪ ಉಪಸ್ಥಿತರಿದರು.


