ಮುರುಘಾಶ್ರೀ ನೀಡಿದ್ದ ಬಸವಶ್ರೀ ಪ್ರಶಸ್ತಿ ವಾಪಸ್ ನೀಡಲು ನಿರ್ಧರಿಸಿದ ಪತ್ರಕರ್ತ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರದುರ್ಗದ ಮುರುಘಾಶ್ರೀ ಡಾ.ಶಿವಮೂರ್ತಿ ಶರಣರು ಪ್ರದಾನ ಮಾಡಿದ್ದ ಬಸವಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸಲು ಪತ್ರಕರ್ತ ಪಿ.ಸಾಯಿನಾಥ್ ನಿರ್ಧರಿಸಿದ್ದಾರೆ.

ಮುರುಘಾಮಠದಿಂದ ಪ್ರತಿವರ್ಷ ಬಸವಶ್ರೀ ಪ್ರಶಸ್ತಿ ನೀಡಲಾಗುತ್ತದೆ ಅದರಂತೆ 2017ರಲ್ಲಿ ಸಾಯಿನಾಥ್ ಅವರಿಗೆ ಈ ಪ್ರಶಸ್ತಿ ನೀಡಲಾಗಿತ್ತು. ಪ್ರಶಸ್ತಿಯೊಂದಿಗೆ 5 ಲಕ್ಷ ಪ್ರೋತ್ಸಾಹಧನ ನೀಡಲಾಗಿತ್ತು. ಸದ್ಯ ಶ್ರೀಗಳ ವಿರುದ್ಧ ಲೈಂಗಿಕ ದೌಜನ್ಯ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಅವರಿಂದ ಪಡೆದ ಪ್ರಶಸ್ತಿ ವಾಪಸ್ ನೀಡಲು ತೀರ್ಮಾನಿಸಿದ್ದಾರೆ. ಜತೆಗೆ 5 ಲಕ್ಷ ನಗದು ಬಹುಮಾನವನ್ನೂ ಹಿಂತಿರುಗಿಸಲು ಮುಂದಾಗಿದ್ದಾರೆ.

1997ರಿಂದ ಮುರುಘಾ ಮಠ ಸಮಾಜ ಸುಧಾರಕ ಬಸವಣ್ಣನವರ ಹೆಸರಲ್ಲಿ ಬಸವಶ್ರೀ ಪ್ರಶಸ್ತಿಯನ್ನು ಪ್ರದಾನ ಮಾಡುತ್ತಾ ಬಂದಿದೆ.
ಇಂದಿನಿಂದ ಮತ್ತೆ ಭಾರಿ ಮಳೆ ಎಚ್ಚರಿಕೆ; ಆರೆಂಜ್ ಅಲರ್ಟ್ ಘೋಷಣೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button