Latest

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; SDPI ಮುಖಂಡನ ನಿವಾಸದ ಮೇಲೆ NIA ದಾಳಿ

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ- ಎನ್ ಐ ಎ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು, ಎಸ್ ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಪರಂಗಿಪೇಟೆ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಎನ್ ಐಎ ಅಧಿಕಾರಿಗಳು ಪುತ್ತೂರು, ಸುಳ್ಯ ಸೇರಿದಂತೆ ದಕ್ಷಿಣ ಕನ್ನಡ, ಮಂಗಳೂರಿನ 32 ಕಡೆಗಳಿಗೆ ದಾಳಿ ನಡೆಸಿ ಕೆಲ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದರು. ಇದೀಗ ಎಸ್ ಡಿಪಿಐ ಮುಖಂಡ ರಿಯಾಜ್ ನಿವಾಸದ ಮೇಲೆ ದಾಳಿ ನಡೆಸಿ ಪರಿಶೀನೆ ನಡೆಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ನ ಪರ್ಲಿಯಾದಲ್ಲಿರುವ ರಿಯಾಜ್ ನಿವಾಸದ ಮೇಲೆ ಬೆಳಿಗ್ಗೆ ದಾಳಿ ನಡೆಸಿರುವ ಎನ್ ಐಎ ಅಧಿಕಾರಿಗಳು ರಿಯಾಜ್ ಮೊಬೈಲ್ ವಶಕ್ಕೆ ಪಡೆದು, ಮನೆಯಲ್ಲಿ ತೀವ್ರ ಶೋಧ ನಡೆಸಿದ್ದಾರೆ.

ಇನ್ನೊಂದೆಡೆ ರಿಯಾಜ್ ನಿವಾಸದ ಮೇಲೆ ಎನ್ ಐಎ ದಾಳಿ ನಡೆಸುತ್ತಿದ್ದಂತೆ ಎಸ್ ಡಿ ಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಗೋ ಬ್ಯಾಕ್ ಎನ್ ಐಎ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಂಟ್ವಾಳದಾದ್ಯಂತ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

ಚಂಡಮಾರುತ ಭೀತಿ; ಮತ್ತೆ ಭಾರಿ ಮಳೆ ಎಚ್ಚರಿಕೆ

https://pragati.taskdun.com/latest/karnatakaheavy-raincyclone/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button