Kannada NewsLatest

ಬೆಳಗಾವಿಯಲ್ಲಿ ಅದ್ದೂರಿ ಗಣೇಶೋತ್ಸವ; ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸೇರಿ ಹಲವು ನಾಯಕರು ಭಾಗಿ

 

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಅದ್ದೂರಿ ಗಣೇಶೋತ್ಸವ ನಡೆದಿದ್ದು, ಗಣೇಶ ವಿರ್ಜನೆ ಕಾರ್ಯಕ್ರಮದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸೇರಿದಂತೆ ಹಲವರು ಭಾಗವಹಿಸಿದ್ದರು.

ಗಣೇಶ ಉತ್ಸವದಲ್ಲಿ ಮಾತನಾಡಿದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಬುದ್ಧಿವಂತಿಕೆ, ಹೃದಯ ಶ್ರೀಮಂತಿಕೆಯ ದೇವರಾದ ಗಣಪತಿಗೆ ಭಕ್ತಿಪೂರ್ವಕ ನಮನಗಳನ್ನು ಸಲ್ಲಿಸಿ, ನಾಡಿನೆಲ್ಲೆಡೆ ಸುಖ,ಶಾಂತಿ, ಸಮೃದ್ದಿ ನೆಲೆಸಲಿ ಎಂದು ಪ್ರಾರ್ಥಿಸಿದ್ದಾಗಿ ತಿಳಿಸಿದರು.

ದೇಶಾದ್ಯಂತ ಅತ್ಯಂತ ಸಡಗರ-ಸಂಭ್ರಮದಿಂದ ಆಚರಿಸುವ ಪ್ರಮುಖ ಹಬ್ಬವೆಂದರೇ ಅದು ಗಣೇಶ ಹಬ್ಬ. ಈ ಹಬ್ಬದಲ್ಲಿ ಪ್ರತಿಯೊಬ್ಬರೂ ಪಾಲ್ಗೊಂಡು ಪ್ರಥಮವಂದ್ಯನಿಗೆ ಪೂಜೆ ಸಲ್ಲಿಸುವುದೇ ಮಹತ್ವದ್ದು ಎಂದು ಹೇಳಿದರು.

 

ಬಳಿಕ ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ವಿವಿಧ ಜಾನಪದ ಕಲಾತಂಡಗಳು, ವಾದ್ಯ ವೃಂದಗಳು , ಝಾಂಜ್ ಮೇಳಗಳು ಮೆರವಣಿಗೆಯುದ್ದಕ್ಕೂ ಸಾಗಿದ್ದು, ಸಾವಿರಾರು ಜನರು ಜಯಘೋಷಗಳೊಂದಿಗೆ ಮೆರವಣಿಗೆಯಲ್ಲಿ ಪಾಲ್ಗೊಂಡರು.

ಜನಸ್ಪಂದನಾ ಸಮಾವೇಶ; ವೇದಿಕೆಯ ಮೇಲೆ ಸಚಿವರಾದ MTB, ಮುನಿರತ್ನ, ಶಾಸಕ ಎಸ್.ಆರ್ ವಿಶ್ವನಾಥ ಭರ್ಜರಿ ಡ್ಯಾನ್ಸ್

https://pragati.taskdun.com/politics/bjp-janaspandana-samaveshabjp-ledesdancedoddaballapura/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button