Latest

ಕಾಂಗ್ರೆಸ್ ಉಪಾಧ್ಯಕ್ಷ ಸೇರಿ ಐವರ ಬಂಧನ

ಪ್ರಗತಿವಾಹಿನಿ ಸುದ್ದಿ; ಮೈಸೂರು: ನಕಲಿ ದಾಖಲೆಗಳನ್ನು ಸೃಷ್ಟಿಸಿ ಸರ್ಕಾರಿ ಹಾಗೂ ಖಾಸಗಿ ಜಾಗಗಳನ್ನು ಮಾರಾಟ ಮಾಡುತ್ತಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಜಾರಾಂ ಸೇರಿದಂತೆ ಐವರು ಆರೋಪಿಗಳನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ.

ಶಾಸಕ ರಿಜ್ವಾನ್ ಅರ್ಷದ್ ಅವರ ತಂದೆಗೆ ಈ ತಂಡ ಮೋಸ ಮಾಡಿತ್ತು. ಮೈಸೂರಿನ ಉದಯಗಿರಿಯಲ್ಲಿರುವ 80×100 ಅಡಿ ವಿಸ್ತೀರಣದ ನಿವೇಶನವನ್ನು ನಕಲಿ ದಾಖಲೆ ಸೃಷ್ಟಿಸಿ ಮುಡಾಗೆ ಸೇರಿದ ದಾಖಲೆ ಪೋರ್ಜರಿ ಮಾಡಿ ಬಳಿಕ ಜಯರಾಂ ಹಾಗೂ ತಂಡ ನಿವೇಶನದ ಮೇಲೆ ಬ್ಯಾಂಕ್ ಸಾಲ ಪಡೆಯಲು ಯತ್ನಿಸಿದೆ.

Home add -Advt

ನಕಲಿ ದಾಖಲೆಗಾಗಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಸೀಲ್ ಗಳನ್ನು ಕೂಡ ಪೋರ್ಜರಿ ಮಾಡಲಾಗಿದೆ. ಇದೀಗ ಪ್ರಕರಣ ಸಂಬಂಧ ಮೈಸೂರು ನಗರ ಕಾಂಗ್ರೆಸ್ ಘಟಕದ ಉಪಾಧ್ಯಕ್ಷ ರಾಜಾರಾಂ, ಮೊಹಮ್ಮದ್ ನಯೀಮ್, ಮೊಹಮ್ಮದ್ ಶಹಬಾಜ್, ಭಾಸ್ಕರ್ ಸೇರಿದಂತೆ ಒಟ್ಟು 5 ಜನರನ್ನು ಬಂಧಿಸಲಾಗಿದೆ. ವಿಚಾರಣೆ ವೇಳೆ ಬಂಧಿತರು ತಾವು ನಕಲಿ ದಾಖಲೆ ಸೃಷ್ಟಿಸಿ ನಿವೇಶ ಮಾರಿದ್ದಾಗಿ ಒಪ್ಪಿಕೊಂಡಿದ್ದಾರೆ.

ಬೆಳಗಾವಿ ಜಿಲ್ಲಾ ಪೊಲೀಸ್ ಈಗ ಜನರಿಗೆ ಇನ್ನಷ್ಟು ಹತ್ತಿರ

https://pragati.taskdun.com/latest/belgaum-district-police-is-now-closer-to-people/

Related Articles

Back to top button