
ಪ್ರಗತಿವಾಹಿನಿ ಸುದ್ದಿ; ಬಳ್ಳಾರಿ: ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ಮೂವರು ರೋಗಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಸ್ಟ್ ಸಿಕ್ಕಿದ್ದು, ವಿಮ್ಸ್ ನಿರ್ದೇಶಕ ಡಾ.ಗಂಗಾಧರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ವಿಮ್ಸ್ ನಿರ್ದೇಶಕ ಸ್ಥಾನದಿಂದ ತನ್ನನ್ನು ಕೆಳಗಿಳಿಸುವ ಬಗ್ಗೆ ಹುನ್ನಾರ ನಡೆಯುತ್ತಿದೆ. ಇದೇ ಕಾರಣಕ್ಕೆ ನನ್ನ ಹೆಸರಿ ಕೆಡಿಸುವ ದುರುದ್ದೇಶದಿಂದ ಆಸ್ಪತ್ರೆಯಲ್ಲಿ ವಿದ್ಯುತ್ ಸ್ಥಗಿತಗೊಳಿಸಿ ರೋಗಿಗಳಿಗೆ ತೊಂದರೆಯಾಗುವಂತೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಕೆಲವರು ನನ್ನ ವಿರುದ್ಧ ಷಡ್ಯಂತ್ರ ನಡೆಸುತ್ತಿದ್ದಾರೆ. ಈ ಬಗ್ಗೆ ಕೆಲ ಆಡಿಯೋಗಳು ಕೂಡ ಲಭ್ಯವಾಗಿವೆ. ನನ್ನ ಹೆಸರು ಕೆಡಿಸಲು ವಿದ್ಯುತ್ ಸಂಪರ್ಕ ಕಡಿತ ಮಾಡಿ ರೋಗಿಗಳ ಸಾವಿಗೆ ಕಾರಣರಾಗಿದ್ದಾರೆ. ಆಸ್ಪತ್ರೆಯಲ್ಲಿ ಕರೆಂಟ್ ಹೋದ ಬಳಿಕ ಕೆಲವರು ನನಗೆ ಕರೆ ಮಾಡಿ ಮಾತನಾಡಿದ್ದಾರೆ. ಆ ಆಡಿಯೋಗಳನ್ನು ಸಂಗ್ರಹಿಸುತ್ತಿದ್ದೇನೆ ಎಂದು ಹೇಳಿದ್ದಾರೆ.
ಬೀದರ್-ಬಳ್ಳಾರಿ ಚತುಷ್ಪಥ ಎಕ್ಸ್ಪ್ರೆ ಸ್ ಹೆದ್ದಾರಿ ನಿರ್ಮಾಣ
https://pragati.taskdun.com/latest/kalyana-karnatakacm-basavaraj-bommaibeedar-bellary-fourway-line/