Latest

BJPಯಲ್ಲಿ ಯಾರೂ ಬೇಲ್ ಮೇಲೆ ಇಲ್ವಾ? ಸಿಎಂಗೆ ಟಾಂಗ್ ನೀಡಿದ ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿ; ಮೈಸೂರು: ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ರಾಜಕೀಯ ಪಕ್ಷಗಳು ಪರಸ್ಪರ ಆರೋಪ-ಪ್ರತ್ಯಾರೋಪ ವಾಕ್ಸಮರಗಳಲ್ಲಿಯೂ ಸ್ಪರ್ಧೆಗಿಳಿದಿವೆ. ಕಾಂಗ್ರೆಸ್ ಪಕ್ಷವೇ ಬೇಲ್ ಮೇಲೆ ಹೊರಗಿದೆ ಎಂಬ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿಕೆಗೆ ತಿರುಗೇಟು ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ,
ಬಿಜೆಪಿಯಲ್ಲಿ ಯಾರೂ ಬೇಲ್ ಮೇಲೆ ಇಲ್ವಾ? ಎಂದು ಪ್ರಶ್ನಿಸಿದ್ದಾರೆ.

ಅತಿ ಭ್ರಷ್ಟ ಬಿಜೆಪಿ ಸರ್ಕಾರ ಎಂದು ವಾಗ್ದಾಳಿ ನಡೆಸಿದ್ದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿಕೆಗೆ ಕಿಡಿಕಾರಿದ್ದ ಸಿಎಂ ಬಸವರಾಜ್ ಬೊಮ್ಮಾಯಿ, ಬಿಜೆಪಿ ವಿರುದ್ಧ ಆರೋಪ ಮಾಡುವ ಹಕ್ಕು ರಾಹುಲ್ ಗಾಂಧಿಯವರಿಗಿಲ್ಲ. ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅಷ್ಟೇ ಏಕೆ ರಾಜ್ಯದ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಇಡೀ ಕಾಂಗ್ರೆಸ್ ಪಕ್ಷದವರೇ ಬೇಲ್ ಮೇಲೆ ಇದ್ದಾರೆ ಕೌಂಟರ್ ನೀಡಿದ್ದರು. ಸಿಎಂ ಈ ಹೇಳಿಕೆಗೆ ಮೈಸೂರಿನಲ್ಲಿ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿಯಲ್ಲಿ ಯಾರೂ ಬೇಲ್ ಮೇಲೆ ಇಲ್ವಾ? ಯಾರೂ ಜೈಲಿಗೆ ಹೋಗಿಲ್ವಾ? ಎಂದು ಕೇಳಿದ್ದಾರೆ.

ಅಮಿತ್ ಶಾ ಜೈಲಿಗೆ ಹೋಗಿಲ್ವಾ? ಯಡಿಯೂರಪ್ಪ, ಸಚಿವ ಸೋಮಣ್ಣ ಇವರೆಲ್ಲ ಬೇಲ್ ಮೇಲೆ ಇಲ್ವಾ? ಬಿಜೆಪಿ ತಟ್ಟೆಯಲ್ಲಿಯೇ ಹೆಗ್ಗಣ ಬಿದ್ದಿದೆ. ಆದರೂ ಅವರು ನಮ್ಮ ತಟ್ಟೆಯಲ್ಲಿ ನೊಣ ಹುಡುಕುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಗಾಂಧಿಜಯಂತಿಯಂದು ನಕಲಿ ಗಾಂಧಿಗಳ ಬಗ್ಗೆ ಮಾತನಾಡಲ್ಲ ಎಂದಿದ್ದ ಸಿಎಂ ಬೊಮ್ಮಾಯಿ ಹೇಳಿಕೆಗೂ ಟಾಂಗ್ ನೀಡಿರುವ ಸಿದ್ದರಾಮಯ್ಯ, ನಕಲಿ ಗಾಂಧಿವಾದಿಗಳೆಂದರೆ ಏನು? ಗಾಂಧಿ ಕೊಂದವರಿಂದ ನಾವು ಇಂತ ಮಾತು ಕೇಳಬೇಕಾ? ಇದೆಂಥಹ ವಿಪರ್ಯಾಸ ನೋಡಿ….ಗಾಂಧಿ ಕೊಂದ ಗೋಡ್ಸೆಯನ್ನು ಮೆರವಣಿಗೆ ಮಾಡುವವರು ಬಿಜೆಪಿಯವರು. ಅಂತವರಿಂದ ಈ ಮಾತು ಕೇಳಬೇಕಾಗಿದೆ. ಸಿಎಂ ಬೊಮ್ಮಾಯಿ ಅವರಿಗೆ ಗಾಂಧಿ ಬಗ್ಗೆಯೂ ಗೊತ್ತಿಲ್ಲ, ಗೋಡ್ಸೆ ಬಗ್ಗೆಯೂ ಗೊತ್ತಿಲ್ಲ, ಸಾವರ್ಕರ್ ಬಗ್ಗೆಯೂ ಗೊತ್ತಿಲ್ಲ. ಸುಮ್ಮನೇ ಮಾತನಾಡುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಗಾಂಧಿ ಜಯಂತಿಯಂದು ನಕಲಿ ಗಾಂಧಿಗಳ ಬಗ್ಗೆ ಮಾತನಾಡಲ್ಲ; ರಾಹುಲ್ ಗಾಂಧಿಗೆ ಸಿಎಂ ಬೊಮ್ಮಾಯಿ ಕೌಂಟರ್

https://pragati.taskdun.com/politics/cm-basavaraj-bommairahul-gandhistatmentreaction/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button