Latest

ರಾಹುಲ್ ಗಾಂಧಿ ಪತ್ರಕ್ಕೆ ಸಿಎಂ ಸ್ಪಂದನೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದು, ರಾಹುಲ್ ಪತ್ರಕ್ಕೆ ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಹುಲ್ ಗಾಂಧಿ ನನಗೆ ಒಂದು ಪತ್ರ ಬರೆದಿದ್ದಾರೆ. ನಾಗರಹೊಳೆ ಅರಣ್ಯದಲ್ಲಿ ಆನೆ ಮತ್ತು ಅದರ ಮರಿಗೆ ಬಾಲ ಮತ್ತು ಸೊಂಡಿಲಲ್ಲಿ ಗಾಯವಾಗಿರುವ ಬಗ್ಗೆ ಪತ್ರದಲ್ಲಿ ಬರೆದಿದ್ದಾರೆ. ಈ ಬಗ್ಗೆ ಸ್ಪಂದಿಸಲಾಗುವುದು ಎಂದು ಹೇಳಿದರು.

ನಾಗರಹೊಳೆ ಅರಣ್ಯಕ್ಕೆ ರಾಹುಲ್ ಗಾಂಧಿ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿ ಆನೆ ಹಾಗೂ ಮರಿ ಆನೆಗೆ ಗಾಯವಾಗಿದ್ದನ್ನು ಗಮನಿಸಿದ್ದು, ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು. ಈ ಬಗ್ಗೆ ಪತ್ರದಲ್ಲಿ ಉಲ್ಲೇಖಿಸಿದ್ದು, ಈ ಬಗ್ಗೆ ಮಾಹಿತಿ ಪಡೆದು ಹಿರಿಯ ಅಧಿಕಾರಿಗಳ ಬಳಿ ಮಾತನಾಡಿ ಆನೆಗಳಿಗೆ ಏನೆಲ್ಲಾ ಚಿಕಿತ್ಸೆ ನೀಡಬಹುದು ಎಂದು ಪರಿಶೀಲನೆ ಮಾಡಲಾಗುವುದು. ಚಿಕಿತ್ಸೆಗೆ ವ್ಯವಸಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ‘ಭಾರತ್ ಜೋಡೋ ಯಾತ್ರೆ’ಗೆ BJPಯಿಂದ ಪರ್ಯಾಯ ಯಾತ್ರೆ

https://pragati.taskdun.com/politics/cm-basavaraj-bommaibjp-yatrebharat-jodo-yatrereaction/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button