Kannada NewsLatest

ರಾಣಿ ಚೆನ್ನಮ್ಮ ಸೇರಿದಂತೆ 3 ವಿಶ್ವವಿದ್ಯಾಲಯಗಳಿಗೆ KAS ಅಧಿಕಾರಿಗಳ ನೇಮಕ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಸರ್ಕಾರ  ಮೂರು ವಿಶ್ವ ವಿದ್ಯಾಲಯಗಳಿಗೆ ಕುಲಸಚಿವರನ್ನಾಗಿ ಕೆ.ಎ.ಎಸ್ ಅಧಿಕಾರಿಗಳನ್ನು ನೇಮಕ ಮಾಡಿದೆ.

ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವ ವಿದ್ಯಾಲಯಕ್ಕೆ ಕೆ.ಟಿ.ಶಾಂತಲಾ, ಬೆಂಗಳೂರು ವಿಶ್ವ ವಿದ್ಯಾಲಯಕ್ಕೆ ಮಹೇಶ್ ಬಾಬು ಹಾಗೂ ಗುಲ್ಬರ್ಗಾ ವಿಶ್ವ ವಿದ್ಯಾಲಯಕ್ಕೆ ಡಾ.ಬಿ.ಶರಣಪ್ಪ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

ಮೂರು ವಿಶ್ವ ವಿದ್ಯಾಲಯಗಳಿಗೆ ಕುಲಸಚಿವರನ್ನಾಗಿ ಏಕಾಏಕಿ ಕೆ.ಎ.ಎಸ್ ಅಧಿಕಾರಿಗಳನ್ನು ನೇಮಕ ಮಾಡಿರುವ ರಾಜ್ಯ ಸರ್ಕಾರದ ನಡೆ ಕುತೂಹಲ ಮೂಡಿಸಿದೆ.

 

Home add -Advt
https://pragati.taskdun.com/latest/karnatakarain-updateheavy-rain/

Related Articles

Back to top button