Latest

ಜನಸಂಕಲ್ಪ ಯಾತ್ರೆ ಮೂಲಕ ಚುನಾವಣೆಗೆ BJP ರಣಕಹಳೆ; ಸಿದ್ದರಾಮಯ್ಯ, ರಾಹುಲ್ ಗಾಂಧಿ ವಿರುದ್ಧ ಬಿ ಎಸ್ ವೈ ಹಿಗ್ಗಾ ಮುಗ್ಗಾ ವಾಗ್ದಾಳಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 2023ರರ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ರಾಜಕೀಯ ಪಕ್ಷಗಳು ಮತಬೇಟೆಗೆ ಪೈಪೋಟಿಗಿಳಿದಿವೆ. ಒಂದೆಡೆ ಸಂಸದ ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಭಾರತ್ ಜೋಡೋ ಪಾದಯಾತ್ರೆ ರಾಯಚೂರಿನತ್ತ ಸಾಗುತ್ತಿರುವಾಗಲೇ ಬಿಜೆಪಿ ರಾಯಚೂರಿನಿಂದಲೇ ಜನಸಂಕಲ್ಪ ಯಾತ್ರೆ ಮೂಲಕ ಚುನಾವಣಾ ರಣಕಹಳೆ ಮೊಳಗಿಸಿದೆ.

 

ರಾಯಚೂರಿನ ಗಿಲ್ಲೆಸಗೂರಿನಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆ ಆರಂಭವಾಗಿದ್ದು, ಈ ವೇಳೆ ಸಮಾವೇಶ ಉದ್ದೇಶಿಸಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ರಾಹುಲ್ ಗಾಂಧಿ ಬಚ್ಚಾ ಎಂದು ಕಿಡಿಕಾರಿದ್ದಾರೆ. ಭಾರತ್ ಜೋಡೋ ಯಾತ್ರೆ ಚುನಾವಣೆ ಮೇಲೆ ಯಾವುದೇ ಪರಿನಾಮವನ್ನೂ ಬೀರಲ್ಲ ಎದು ಹೇಳಿದ್ದಾರೆ.

Home add -Advt

ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುತ್ತಿದ್ದಾರೆ. ಸಿದ್ದರಾಮಯ್ಯನವರೇ ನಿಮ್ಮ ಹಗರಣಗಳನ್ನೆಲ್ಲ ಬಯಲು ಮಾಡುತ್ತೇವೆ. ಮುಂದಿನ ಅಧಿವೇಶನದಲ್ಲಿ ನಿಮ್ಮ ಸರ್ಕಾರದ ಅವಧಿಯಲ್ಲಿನ ಹಗರಣಗಳ ಬಗ್ಗೆ ಜನರ ಮುಂದೆ ಇಡಲಾಗುವುದು ಎಂದು ವಾಗ್ದಾಳಿ ನಡೆಸಿದರು.

ನಮ್ಮ ಸರ್ಕಾರದ ಬಗ್ಗೆ ಮಾತನಾಡುತ್ತೀರಾ? ರಾಬರ್ಟ್ ವಾದ್ರ ವಿರುದ್ಧದ ಹಗರಣಗಳ ಬಗ್ಗೆ ಗೊತ್ತಿಲ್ಲವೇ? ಅವರ ಹಗರಣಗಳ ಪಟ್ಟಿ ಇದೆಯೇ? ನ್ಯಾಷನಲ್ ಹೆರಾಲ್ಡ್ ಹಗರಣ ಗೊತ್ತಿಲ್ಲವೇ? ಹಗರಣಗಳನ್ನು ಮಾಡದ ಪ್ರಧಾನಿ ಮೋದಿಯವರ ಬಗ್ಗೆಯೂ ಮಾತನಾಡುತ್ತಿದ್ದೀರಾ? 25 ಲಕ್ಷ ಹ್ಯೂಬ್ಲೆಟ್ ವಾಚ್ ಕೊಟ್ಟಿದ್ಯಾರು? ನಿಮ್ಮ ಹಗರಣಗಳ ಬಗ್ಗೆ ತನಿಖೆ ಮಾಡಿಸಿ ನಿಮ್ಮನ್ನು ಎಲ್ಲಿ ನಿಲ್ಲಿಸಬೇಕೋ ಅಲ್ಲಿ ನಿಲ್ಲಿಸುತ್ತೇವೆ. ಪ್ರಧಾನಿ ಮೋದಿ ಅವರ ಕಾಲು ಬುಡದಲ್ಲಿ ಕೂರೋ ಯೋಗ್ಯತೆಯೂ ನಿಮಗಿಲ್ಲ ಎಂದು ಗುಡುಗಿದ್ದಾರೆ.

ಬಿಜೆಪಿ ಜನಸಂಕಲ್ಪ ಯಾತ್ರೆ ಆರಂಭ

https://pragati.taskdun.com/politics/cm-basavaraj-bommaibjp-janasankalpa-yatrebharath-jodo-yatre/

Related Articles

Back to top button