
ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ರೇಣುಕಾಚಾರ್ಯ ಆಪ್ತ ಸಹಾಯಕನ ಮೆಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿ ನಡೆದಿದೆ.
ರೇಣುಕಾಚಾರ್ಯ ಆಪ್ತಸಹಾಯಕ ಪ್ರಜ್ವಲ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿನೆ ರಾತ್ರಿ ದುಷ್ಕರ್ಮಿಗಳ ಗುಮ್ಪು ಪ್ರಜ್ವಲ್ ಮೇಲೆ ಹಲ್ಲೆ ನಡೆಸಿದೆ ಎಂದು ತಿಳಿದುಬಂದಿದೆ.
ಹಿನ್ನಾಳಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿರುವ ಶಾಸಕ ರೇಣುಕಾಚಾರ್ಯ, ಆಪ್ತಸಹಾಯಕನ ಆರೋಗ್ಯ ವಿಚಾರಿಸಿದ್ದಾರೆ. ದುಷ್ಕರ್ಮಿಗಳನ್ನು ಪತ್ತೆ ಮಾಡಿ ತಕ್ಷಣ ಬಂಧಿಸುವಂತೆ ಪೊಲಿಸರಿಗೆ ಶಾಸಕರು ಸೂಚಿಸಿದ್ದಾರೆ.