
ಪ್ರಗತಿವಾಹಿನಿ ಸುದ್ದಿ; ಧರ್ಮಸ್ಥಳ: ಅಕ್ಟೋಬರ್ 25ರಂದು ಸೂರ್ಯಗ್ರಹಣ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಾಲಯದ ಸಾಯದಲ್ಲಿ ಕೆಲ ಬದಲಾವಣೆ ಮಾಡಲಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.
ಅ.25ರಂದು ಸೂರ್ಯಗ್ರಹಣವಿರುವುದರಿಂದ ಭಕ್ತಾದಿಗಳಿಗೆ ದೇವರ ದರ್ಶನದಲ್ಲಿ ಸ್ವಲ್ಪ ಬದಲಾವಣೆ ಮಾಡಲಾಗಿದ್ದು, ಮಧ್ಯಾಹ್ನ 2:30ರಿಂದ ಸಂಜೆ 7:30ರವರೆಗೆ ಮಂಜುನಾಥ ಸ್ವಾಮಿ ದರ್ಶನಕ್ಕೆ ಅವಕಾಶವಿಲ್ಲ.
ಅನ್ನಸಂತರ್ಪಣೆ ಸಮಯದಲ್ಲಿಯೂ ಬದಲಾವಣೆ ಮಾಡಲಾಗಿದ್ದು, ಮಧ್ಯಾಹ್ನದ ಅನ್ನಸಂತರ್ಪಣೆ ಕ್ಷೇತ್ರದಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ನಡೆಯಲಿದೆ. ರಾತ್ರಿಯ ಅನ್ನಸಂತರ್ಪಣೆ 7:30ರಿಂದ ಕ್ಷೇತ್ರದಲ್ಲಿ ಯಥಾಸ್ಥಿತಿಯಲ್ಲಿ ನಡೆಯಲಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಪಾರುಪತ್ಯಗಾರರು ತಿಳಿಸಿದ್ದಾರೆ.
90 ಮೀಟರ್ ಏರಿಯಲ್ ಲ್ಯಾಡರ್ ಪ್ಲಾಟ್ಫಾರಂ ವಾಹನ ಲೋಕಾರ್ಪಣೆ
https://pragati.taskdun.com/politics/karnataka-state-fire-and-emergency-services-inauguration-of-90-meter-aerial-ladder-platform-vehiclecm-basavaraj-bommai/