Kannada NewsKarnataka NewsLatest

ಪತ್ನಿಯ ತಂಟೆಗೆ ಬರಬೇಡ ಎಂದಿದ್ದಕ್ಕೆ ಕೊಲೆ

ಪ್ರಗತಿ ವಾಹಿನಿ ಸುದ್ದಿ, ಖಾನಾಪುರ: ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ವ್ಯಕ್ತಿಯೊಬ್ಬನನ್ನು ಕಟ್ಟಿಗೆಯಿಂದ ತಲೆಗೆ ಹೊಡೆದು, ಬಳಿಕ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಲಾಗಿದೆ.

ಮಾರುತಿ ಅಲಿಯಾಸ್ ಕೃಷ್ಣ ಗಣುರಾವ್ ಜಾಧವ ( 40) ಕೊಲೆಯಾದವರು. ಪ್ರಶಾಂತ ದತ್ತಾತ್ರೇಯ ನಾರ್ವೇಕರ್ ( 35) ಕೊಲೆ ಮಾಡಿದ ಆರೋಪಿಯಾಗಿದ್ದಾನೆ.

ಆರೋಪಿ ಪ್ರಶಾಂತ, ಮಾರುತಿಯ ಪತ್ನಿಗೆ ಕಿರುಕುಳ ನೀಡುತ್ತಿದ್ದ. ಈ ಬಗ್ಗೆ ಪ್ರಶಾಂತನಿಗೆ ಮಾರುತಿ ಎಚ್ಚರಿಕೆ ನೀಡಿದ್ದಕ್ಕೆ ಸಿಟ್ಟಿಗೆದ್ದ ಪ್ರಶಾಂತ ಕಟ್ಟಿಗೆಯಿಂದ ತಲೆಗೆ ಹೊಡೆದು , ಬಳಿಕ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.

ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಖಾನಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌

ಜ್ಯೋತಿಷಿ ಮಾತು ನಂಬಿ ಪ್ರಿಯಕರನನ್ನೇ ಮುಗಿಸಿದ ಯುವತಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button