Kannada NewsKarnataka NewsLatest

ಪತ್ನಿಯ ತಂಟೆಗೆ ಬರಬೇಡ ಎಂದಿದ್ದಕ್ಕೆ ಕೊಲೆ

ಪ್ರಗತಿ ವಾಹಿನಿ ಸುದ್ದಿ, ಖಾನಾಪುರ: ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ವ್ಯಕ್ತಿಯೊಬ್ಬನನ್ನು ಕಟ್ಟಿಗೆಯಿಂದ ತಲೆಗೆ ಹೊಡೆದು, ಬಳಿಕ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಲಾಗಿದೆ.

ಮಾರುತಿ ಅಲಿಯಾಸ್ ಕೃಷ್ಣ ಗಣುರಾವ್ ಜಾಧವ ( 40) ಕೊಲೆಯಾದವರು. ಪ್ರಶಾಂತ ದತ್ತಾತ್ರೇಯ ನಾರ್ವೇಕರ್ ( 35) ಕೊಲೆ ಮಾಡಿದ ಆರೋಪಿಯಾಗಿದ್ದಾನೆ.

ಆರೋಪಿ ಪ್ರಶಾಂತ, ಮಾರುತಿಯ ಪತ್ನಿಗೆ ಕಿರುಕುಳ ನೀಡುತ್ತಿದ್ದ. ಈ ಬಗ್ಗೆ ಪ್ರಶಾಂತನಿಗೆ ಮಾರುತಿ ಎಚ್ಚರಿಕೆ ನೀಡಿದ್ದಕ್ಕೆ ಸಿಟ್ಟಿಗೆದ್ದ ಪ್ರಶಾಂತ ಕಟ್ಟಿಗೆಯಿಂದ ತಲೆಗೆ ಹೊಡೆದು , ಬಳಿಕ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.

ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಖಾನಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌

Home add -Advt

ಜ್ಯೋತಿಷಿ ಮಾತು ನಂಬಿ ಪ್ರಿಯಕರನನ್ನೇ ಮುಗಿಸಿದ ಯುವತಿ

Related Articles

Back to top button