Latest

ರಾಜ್ಯದಲ್ಲಿ ಮೊದಲ ಬಾರಿಗೆ ಶ್ವಾನ ಕೇಂದ್ರ ಆರಂಭ

ಪ್ರಗತಿವಾಹಿನಿ ಸುದ್ದಿ; ಮೈಸೂರು :  ಮೈಸೂರಿನಲ್ಲಿ ಬೀದಿನಾಯಿಗಳ ಹಾವಳಿ ಕಡಿಮೆ ಮಾಡಲು ಕ್ಷೇತ್ರದಲ್ಲಿ ಬೀದಿ ನಾಯಿಗಳಿಂದ ಮಕ್ಕಳಿಗೆ ಹಾಗೂ ನಾಗರೀಕರಿಗೆ ಉಂಟಾಗುತ್ತಿದ್ದ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲು ರಾಜ್ಯದಲ್ಲೇ ಪ್ರಪ್ರಥಮವಾಗಿ ಶ್ವಾನ ಕೇಂದ್ರ ನಿರ್ಮಾಣವಾಗುತ್ತಿದೆ.

ರಾಯನಕೆರೆಯ 3 ಎಕರೆ ಪ್ರದೇಶದಲ್ಲಿ ಬೀದಿ ನಾಯಿಗಳ ಆಶ್ರಯಕ್ಕಾಗಿ ನೂತನವಾಗಿ “ಶ್ವಾನ ಕೇಂದ್ರ” ನಿರ್ಮಿಸಲಾಗುತ್ತಿದ್ದು, ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯನ್ನು ಪರಿಶೀಲಿಸಿದ ಶಾಸಕ ಎಸ್ ಎ ರಾಮದಾಸ್, ಡಿಸೆಂಬರ್ 25 ರಂದು ಶ್ವಾನ ಕೇಂದ್ರಕ್ಕೆ ಚಾಲನೆ ದೊರೆಯಲಿದೆ ಎಂದರು.

ಕಾಮಗಾರಿಗಳನ್ನು ಕಾಲಾವಧಿಯೊಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು. ಈ ವೇಳೆ ಮೇಯರ್ ಶಿವಕುಮಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ನನ್ನ ತಂದೆಯನ್ನು ಪೊಲೀಸರು ಚಿತ್ರಹಿಂಸೆ ಕೊಟ್ಟು ಸಾಯಿಸಿದ್ದಾರೆ: ಬಸನಗೌಡ ಪುತ್ರಿ ಆಕ್ರೋಶ

https://pragati.taskdun.com/latest/rohini-patilreactionbasanagouda-deathbelagavi/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button