Kannada NewsLatest

ಲೈನ್ ರಿಪೇರಿ ವೇಳೆ ಕರೆಂಟ್ ಶಾಕ್ ; ವಿದ್ಯುತ್ ಕಂಬದ ಮೇಲೆ ಇಬ್ಬರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಅಥಣಿ: ವಿದ್ಯುತ್ ಲೈನ್ ರಿಪೇರಿ ವೇಳೆ ವಿದ್ಯುತ್ ಪ್ರವಹಿಸಿ ಕಂಬದ ಮೇಲೆಯೇ ಇಬ್ಬರು ಸಿಬ್ಬಂದಿಗಳು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನಡೆದಿದೆ.

ಇಲ್ಲಿನ ಬಾಳಿಗೇರಿ ಗ್ರಾಮದಲ್ಲಿ ಬಾಳಿಗೇರಿ – ಬೇವನೂರ ಹೆಸ್ಕಾಂ ಲಿಂಕ್ ಲೈನ್ ಕಾಮಗಾರಿ ಮಾಡುವ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ಕೆಲಸ ನಿರ್ವಹಿಸುತ್ತಿದ್ದ ಅಶೋಕ್ ಮಲ್ಲಪ್ಪ ಮಾಳಿ (35) , ಹಣಮಂತ ಹಾಲಪ್ಪ ಮಗದುಮ್ (36) ಮೃತಪಟ್ಟಿದ್ದಾರೆ.

ಇಬ್ಬರೂ ರಾಯಬಾಗ ತಾಲೂಕಿನ ಹಿಡಕಲ್ ಗ್ರಾಮದವರು. ಹೆಸ್ಕಾಂ ಬೇಜವಾಬ್ದಾರಿಯಿಂದ ಇಬ್ಬರು ಲೈನ್ ರಿಪೇರಿ ಕೆಲಸಗಾರರು ಬಲಿಯಾಗಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಕರಣ ಸಂಬಂಧ ಸಂಬಂಧಪಟ್ಟ ಹೆಸ್ಕಾಂ ಅಧಿಕಾರಿಗಳ ಮೇಲೆ ಪ್ರಕರಣ ದಾಖಲಿಸಲಾಗುವದು ಎಂದು ಬೆಳಗಾವಿ ಎಸ್ ಪಿ ಸಂಜೀವ್ ಪಾಟೀಲ್ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button