Latest

ಮಹಿಳಾ ವೈದ್ಯಾಧಿಕಾರಿ ನಿಗೂಢ ಸಾವು

ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಕೃಷ್ಠರೋಗ ನಿವಾರಣಾಧಿಕಾರಿ ಡಾ.ರೂಪಾ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಚಿತ್ರದುರ್ಗದ ಜಿಲ್ಲಾ ಕೃಷ್ಠ ರೋಗ ನಿವಾರಣಾಧಿಕಾರಿಯಾಗಿದ್ದ ಡಾ.ರೂಪಾ, ವಿ.ಪಿ.ಎಕ್ಸ್ ಟೆನ್ಶ್ಯನ್ ಬಡಾವಣೆಯಲ್ಲಿರುವ ತಮ್ಮ ಮನೆಯಲ್ಲಿಯೇ ಶವವಾಗಿ ಪತ್ತೆಯಾಗಿದ್ದಾರೆ.

ಮನೆಯಲ್ಲಿ ಕಾಲುಜಾರಿ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ತಲೆಯ ಭಾಗದಲ್ಲಿ ಗಂಭೀರವಾಗಿ ಗಾಯವಾಗಿದ್ದು, ತೀವ್ರರಕ್ತಸ್ರಾವದಿಂದ ಕೊನೆಯುಸಿರೆಳೆದಿರಬಹುದು ಎನಲಾಗಿದೆ.

ಆಸ್ಪತ್ರೆಗೆ ಹೋಗುವ ಗಡಿಬಿಡಿಯಲ್ಲಿ ಡಾ.ರೂಪಾ ಕಾಲು ಜಾರಿ ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದರು ಎಂದು ರೂಪಾ ಪತಿ ಡಾ. ರವಿ ತಿಳಿಸಿದ್ದಾರೆ. ಪ್ರಕರಣದ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

Home add -Advt

ಮಗನನ್ನೇ ಸುಪಾರಿಕೊಟ್ಟು ಕೊಲ್ಲಿಸಿದ ಉದ್ಯಮಿ ತಂದೆ

https://pragati.taskdun.com/hublibussinesmanmurdersonhublibharath-jainakhil-jain/

ಮಹಾರಾಷ್ಟ್ರ ಸಚಿವರು ರಾಜ್ಯ ಪ್ರವೇಶಿಸಲು ಬಿಡುವುದಿಲ್ಲ; ಜಿಲ್ಲಾಡಳಿತಕ್ಕೆ ಕಟ್ಟೆಚ್ಚರಕ್ಕೆ ಸೂಚನೆ; ಆರ್.ಅಶೋಕ್

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button