Karnataka News

ಕೆಜಿಎಫ್‍ನಲ್ಲಿ 7ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು !

ಪ್ರಗತಿ ವಾಹಿನಿ ಸುದ್ದಿ, ಕೋಲಾರ:
ಚಿಕ್ಕ ವಯಸ್ಸಿನಲ್ಲೇ ಹೃದಯದ ಕಾಯಿಲೆಗೆ ಬಲಿಯಾಗುವವರ ಸಂಖ್ಯೆ ಹೆಚ್ಚುತ್ತಿದೆ. ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನಲ್ಲಿ 7ನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ.

ಕೆಜಿಎಫ್‍ನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಜಯಶ್ರೀ (12) ಮೃತಪಟ್ಟ ವಿದ್ಯಾರ್ಥಿನಿ.

ಜಯಶ್ರೀ ಮೂಲತಃ ಮುಳಬಾಗಿಲು ತಾಲೂಕಿನ ಮಿಟ್ಟೂರು ಗ್ರಾಮದವಳಾಗಿದ್ದು ಕೆಜಿಎಫ್‍ನಲ್ಲಿ ಓದುತ್ತಿದ್ದಳು.

ಕೆಜಿಎಫ್ ಸರಕಾರಿ ಆಸ್ಪತ್ರೆಯಲ್ಲಿ ಬಾಲಕಿಯ ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ಬಾಲಕಿಯ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ.

 

ನಿಮ್ಮ ಭಾಗದಲ್ಲಿ ಶಾಂತಿ-ಸೌಹಾರ್ದತೆ ನೀವು ಕಾಪಾಡಿಕೊಳ್ಳಿ, ನಮ್ಮ ಭಾಗದಲ್ಲಿ ನಾವು ನೋಡಿಕೊಳ್ಳುತ್ತೇವೆ; ಖಡಕ್ ಸಂದೇಶ ರವಾನಿಸಿದ ಸಿಎಂ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button