LatestUncategorized

*ಭೀಕರ ಅಪಘಾತ: ಖ್ಯಾತ ಯಕ್ಷಗಾನ ಭಾಗವತ ತಿಮ್ಮಪ್ಪ ಹೆಗಡೆ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಯಲ್ಲಾಪುರ: ಯಕ್ಷಗಾನದ ಹಿರಿಯ ಅನುಭವಿ ಭಾಗವತರು ತಿಮ್ಮಪ್ಪ ಹೆಗಡೆ ಬಾಳೇಹದ್ದ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ನಿನ್ನೆ ರಾತ್ರಿ ಶಿರಸಿ-ಯಲ್ಲಾಪುರ ರಾಜ್ಯ ಹೆದ್ದಾರಿಯಯ ಹಿತ್ಲಳ್ಳಿ ಕ್ರಾಸ್ ಬಳಿ ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ತಿಮ್ಮಪ್ಪ ಹೆಗಡೆ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಶಿರಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಯಕ್ಷಗಾನ ಮಟ್ಟು ಮತ್ತು ರಾಗಗಳಲ್ಲಿ ವಿಶೇಷ ಪರಿಣತಿ ಪಡೆದಿದ್ದ ತಿಮ್ಮಪ್ಪ ಹೆಗಡೆ ಅಗಲಿಕೆಗೆ ಯಕ್ಷಗಾನ ಕಲಾವಿದರು ಕಂಬನಿ ಮಿಡಿದಿದ್ದಾರೆ. ತಿಮ್ಮಪ್ಪ ಹೆಗಡೆ ನಿಧನ ಯಕ್ಷ ಲೋಕಕ್ಕೆ ತುಂಬಲಾರದ ನಷ್ಟ.

*ಜನಾರ್ಧನ ರೆಡ್ಡಿ ರಾಜಕಾರಣಕ್ಕೆ ಮುನ್ನುಡಿಯಾಗಲಿದೆಯಾ ನೂತನ ಮನೆ ಗೃಹ ಪ್ರವೇಶ?*

https://pragati.taskdun.com/janardhana-reddyghuhapraveshagangavatikoppala/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button