Kannada NewsLatestUncategorized

*ಗೌರವ ಡಾಕ್ಟರೇಟ್ ಸ್ವೀಕರಿಸಿದ ಎಂ.ವಿ.ಜಾಲಿ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬಳ್ಳಾರಿಯ ವಿಜಯ ನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿಗೆ ಭಾಜನರಾದ ಕೆಎಲ್‌ಇ ಸಂಸ್ಥೆಯ ಕ್ಯಾನ್ಸರ್ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಎಂ.ವಿ ಜಾಲಿ ಅವರಿಗೆ ಇತ್ತೀಚೆಗೆ ನಡೆದ ಕೊನಿಯಾಪ್ಸ್ -28 ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು.

ಪದವಿ ಸ್ವೀಕರಿಸಿ ಮಾತನಾಡಿದ ಡಾ. ಎಂ.ವಿ ಜಾಲಿ ಅವರು, ಭಾರತದ ಪ್ರಾಚೀನ ಪಾಂಡಿತ್ಯದಿಂದ ಪ್ರೇರಿತರಾಗಿ ಅನೇಕ ವಿದೇಶಿ ವಿಜ್ಞಾನಿಗಳುಸಂಶೋಧನೆಗೈದು ವಿಶ್ವಕ್ಕೆ ಮಾದರಿಯಾಗಿದ್ದಾರೆ. ಆರೋಗ್ಯ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ತಂತ್ರಜ್ಞಾನಧಾರಿತ ಸೇವೆಗಳಿಂದ ಭವಿಷ್ಯದಲ್ಲಿ ವಿಜ್ಞಾನ ಲೋಕದಲ್ಲಿ ಮತ್ತಷ್ಟು ಅಚ್ಚರಿಗಳನ್ನು ಕಾಣಬಹುದು ಎಂದು ಹೇಳಿದರು.

ಗುಂಟೂರು ವಿಜ್ಞಾನ ಅಕಾಡೆಮಿ ಆಫ್ ಸೈನ್ಸ್, ಟೆಕ್ನಾಲಜಿ ಮತ್ತು ರಿಸರ್ಚ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ. ನಾಗಭೂಷಣ್ ಅವರು ಸಮ್ಮೇಳನ ಉದ್ಘಾಟಿಸಿ ಮಾತನಾಡಿ, ದೇಶದ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವದ ಗಮನ ಸೆಳೆಯುತ್ತಿದೆ. ಆದರೆ ’ದೇಶದಲ್ಲಿ ಸುಸ್ಥಿರ ಕಲಿಕೆ ಮತ್ತು ಶಿಕ್ಷಣ ಕುರಿತು ಆಲೋಚಿಸುವುದು ಕುಂಠಿತಗೊಂಡಿದೆ ಎಂದು ಕಳವಳ ವ್ಯಕ್ತಪಡಿಸಿದರು.

 

ಶಾಲಾ ಹಂತದಿಂದ ಮೌಲ್ಯಾಧಾರಿತ ಶಿಕ್ಷಣವನ್ನು ಮಕ್ಕಳಿಗೆ ಕೊಟ್ಟರೆ ಮುಂದೆ ಉನ್ನತ ವ್ಯಾಸಂಗ ಮಾಡುವಾಗ ಹೊಸ ಆವಿಷ್ಕಾರಗಳ ಬಗ್ಗೆ ಯೋಚಿಸಲು ಅವರಿಗೆ ಸಾಧ್ಯವಾಗಲಿದೆ ಎಂದರು.

ಐಪಿಎಸ್ ಸಂಸ್ಥೆಯ ಕೊನಿಯಾಪ್ಸ್ ಸಮ್ಮೇಳನದ ರೂವಾರಿಯಾಗಿದ್ದ ಸಂಸ್ಥೆಯ ಸಂಸ್ಥಾಪಕರಾಗಿದ್ದ ದಿ. ಪ್ರೊ. ಪಾಂಡೆ ಅವರನ್ನು ಸ್ಮರಿಸಲಾಯಿತು. ಐಎಪಿಎಸ್ ಸಂಸ್ಥೆ ಅಧ್ಯಕ್ಷ ಪ್ರೊ. ಎಚ್ ಎಸ್. ಧಾಮಿ ಮತ್ತು ಕಾರ್ಯದರ್ಶಿ ಪ್ರೊ. ಶುಕ್ಲಾ, ಪ್ರಾಸ್ತಾವಿಕವಾಗಿ ಮಾತನಾಡಿದರು.

ಆಮರಿಕ ಫ್ಲೋರಿಡಾ ಕೇಂದ್ರ ವಿಶ್ವವಿದ್ಯಾಲಯದ ಪ್ರೊ. ರಾಮ್‌ಮೋಹಪಾತ್ರಾ, ರಾಜ್ಯ ಉನ್ನತ ಶಿಕ್ಷಣ ಅಕಾಡೆಮಿಯ ಧಾರವಾಡದ ನಿರ್ದೇಶಕರಾದ ಪ್ರೊ. ಎಸ್ ಎಂ ಶಿವಪ್ರಸಾದ, ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಎಸ್ ಸಿ ಪಾಟೀಲ, ಪ್ರೊ. ರಮೇಶ್ ಓಲೇಕಾರ, ಕೆವಿ ಪ್ರಸಾದ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button