
ಪ್ರಗತಿವಾಹಿನಿ ಸುದ್ದಿ; ಹರಿಹರ: ಶಾಲೆಗೆ ಪರವಾನಗೆ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಹರಿಹರ ಕ್ಷೇತ್ರದ ಶಿಕ್ಷಣಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ದಾವಣಗೆರೆ ಜಿಲ್ಲೆಯ ಹರಿಹರ ನಗರದ ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದಪ್ಪ ಅವರನ್ನು ಕಚೇರಿಯಲ್ಲಿಯೇ ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.
ಖಾಸಗಿ ಶಾಲೆಯೊಂದಕ್ಕೆ ಪರವಾನಗೆ ನೀಡಲು ಹರಿಹರದ ವಿದ್ಯಾವಾಹಿನಿ ಶಾಲೆಯ ಮುಖ್ಯಸ್ಥ ರಘುನಾಥ್ ಎಂಬುವವರಿಗೆ ಹಣಕ್ಕೆ ಬೇಡಿಕ್ಕೆ ಇಟ್ಟಿದ್ದ ಸಿದ್ದಪ್ಪ, 15,000 ರೂಪಾಯಿ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
*ಕಳಸಾ ಬಂಡೂರಿ ವಿಸ್ತೃತ ಯೋಜನೆಗೆ ಅನುಮತಿ ನೀಡಿದ ಕೇಂದ್ರ ಸರ್ಕಾರ*
https://pragati.taskdun.com/kalasabanduri-water-projectcentral-water-commissionprahlad-joshi/