Latest

*ಬೂತ್ ವಿಜಯ ಅಭಿಯಾನಕ್ಕೆ ಸಿಎಂ ಚಾಲನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೂತ್ ಸಶಕ್ತಗೊಳಿಸಲು ಸಂಘಟಿತರಾಗಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಶಿವಾಜಿನಗರ ಕ್ಷೇತ್ರದಲ್ಲಿ ಬೂತ್ ವಿಜಯ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

ಶಿವಾಜಿನಗರ ವಿಧಾನಸಭಾ ಕ್ಷೇತ್ರ ವಸಂತನಗರ ವಾರ್ಡ್ ಬೂತ್ ನಂ. 50 ಇಲ್ಲಿಂದ ವಿಜಯ ಸಂಕಲ್ಪ ಪ್ರಾರಂಭವಾಗುತ್ತಿದೆ. ಬೂತ್ ಮಟ್ಟದ ವಿಜಯ ಸಾಧ್ಯವಾಗಿಸಲು ಬೂತ್ ಮಟ್ಟದ ಅಭಿಯಾನವನ್ನು ಕೈಗೊಳ್ಳಲು ರಾಷ್ಟ್ರ ಮತ್ತು ರಾಜ್ಯಾಧ್ಯಕ್ಷರ ಸೂಚನೆಯ ಮೇರೆಗೆ ಚಾಲನೆಯನ್ನು ನೀಡಲಾಗಿದೆ. ಅತ್ಯಂತ ಕಷ್ಟವಾದ ಕ್ಷೇತ್ರ ಎನಿಸಿರುವ ಶಿವಾಜಿನಗರದಿಂದ ಕಾರ್ಯಕ್ರಮವನ್ನು ಪ್ರಾರಂಭಿಸಿದ್ದೇವೆ. ಶಿವಾಜಿನಗರ ಒಂದು ಕಾಲದಲ್ಲಿ ಬಿಜೆಪಿ ಗೆದ್ದಿತ್ತು. ಕಟ್ಟಾ ಸುಬ್ರಮಣ್ಯ ನಾಯ್ಡು ಅವರು ಹಿಂದೆ ಗೆದ್ದಿದ್ದರು. ನಿರ್ಮಲ್ ಕುಮಾರ್ ಸುರಾನಾ ಚಿಕ್ಕಪೇಟೆಯಲ್ಲಿ ಪಿಸಿ ಮೋಹನ್ ಗೆದ್ದಿದ್ದರು. ಶಿವಾಜಿನಗರ ಕ್ಷೇತ್ರದ ವಿಜಯಕ್ಕಾಗಿ ಇಲ್ಲಿ ಬಂದಿದೇನೆ. ಇದಕ್ಕೆ ಹೆಚ್ಚಿನ ಸಮಯವನ್ನು ಕೊಡುತಿದ್ದು, ಕರೆದಾಗ ಬಂದು ಕೆಲಸ ಕಾರ್ಯಗಳನ್ನು ಮಾಡಿ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಗಮನವನ್ನು ನೀಡಲಾಗುವುದು ಎಂದರು. ಗೆಲ್ಲಲು ಬೂತ್ ಸಶಕ್ತವಾಗಬೇಕು. ಶಿವಾಜಿನಗರದಲ್ಲಿ ಬಿಜೆಪಿ ಗೆದ್ದರೆ, ಕರ್ನಾಟಕದಲ್ಲಿ 130 ಕ್ಕಿಂತ ಹೆಚ್ಚು ಸ್ಥಾನಗಳು ಬಿಜೆಪಿಗೆ ಬಂದೇ ಬರುತ್ತದೆ. ಇದೊಂದು ಒಂದು ರಾಜಕೀಯ ಸಂಕೇತ ಎಂದರು.

ಬೂತ್ ಮಟ್ಟದ ಸಮಿತಿ ರಚಿಸಿ
ಪ್ರತಿಯೊಂದು ಬೂತ್ ನ್ನು ಸಶಕ್ತಗೊಳಿಸಲು ಎಲ್ಲಾ ಪ್ರಮುಖರ ಸಭೆ ಕರೆದು, 100 ಸಕ್ರಿಯವಾಗಿ ಕೆಲಸ ಮಾಡುವ ಕೀ ಮತದಾರರನ್ನು ಒಳಗೊಂಡ ಬೂತ್ ಮಟ್ಟದ ಸಮಿತಿಯನ್ನು ರಚಿಸಿ ಪ್ರತಿಯೊಂದು ಬೂತಿನಲ್ಲಿ ಎಸ್.ಸಿ/ಎಸ್.ಟಿ, ಹಿಂದುಳಿದ ವರ್ಗಗಳು, ಮಹಿಳೆಯರು ಮತ್ತು ಯುವಕರ ಮೋರ್ಚಾಗಳನ್ನು ಸ್ಥಾಪಿಸಿ, ಸಕ್ರಿಯವಾಗಿ ಕೆಲಸ ಮಾಡಿ. ಪೇಜ್ ಸಮಿತಿಗಳಲ್ಲಿ ಪೇಜ್ ಪ್ರಮುಖರಿದ್ದಾರೆ. ಇಲ್ಲಿ ಬರುವ ಸಮಿತಿಯನ್ನು ರಚಿಸಿ ನಿರಂತರವಾಗಿ ಮೂರು ತಿಂಗಳು ಕೆಲಸ ಮಾಡಬೇಕು. ಪ್ರತಿ ಮನೆಗೂ ಭೇಟಿ ನೀಡಿ 4 ಬಾರಿ ಭೇಟಿ ನೀಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆ ಹಾಗೂ ಕಾಂಗ್ರೆಸ್ಸಿನ ಜನವಿರೋಧಿ ನೀತಿಯನ್ನು ತಿಳಿಸುವ ಕೆಲಸವನ್ನು ಮಾಡಬೇಕು. 5 ನೇ ಬಾರಿ ಚುನಾವಣೆಗೆ ಮುನ್ನ ಮತ ಕೇಳಲು ಹೋಗಬೇಕು. ಶಿವಾಜಿನಗರದಲ್ಲಿ ಈ ಬಾರಿ ಬಿಜೆಪಿ ಬಾವುಟ ಹಾರಿಸಬೇಕು. ಬಿಜೆಪಿ ಕಾರ್ಯಕರ್ತರಾಗಿ ಹೆಮ್ಮೆಯಿಂದ ಜನರ ಬಳಿಗೆ ಹೋಗಲು ಸಾಧ್ಯವಿದೆ ಎಂದರು. ವಿಶ್ವದಲ್ಲಿಯೇ ಬಿಜೆಪಿ ಅತಿ ದೊಡ್ಡ ಪಕ್ಷ. ಅತಿ ಹೆಚ್ಚು ಜನ ನಮ್ಮ ತತ್ವ, ಸಿದ್ಧಾಂತ ಮತ್ತು ಕಾರ್ಯಕ್ರಮಗಳನ್ನು ಒಪ್ಪಿರುವುದರಿಂದ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಸದಸ್ಯರಾಗಿದ್ದಾರೆ. ದೇಶಭಕ್ತ, ಸಶಕ್ತ ನಾಯಕತ್ವವನ್ನು ಪ್ರಧಾನಿ ನರೇಂದ್ರ ಮೋದಿಯವರು ನೀಡಿದ್ದಾರೆ. ಭಾರತದ ಭದ್ರತೆಯ ಜೊತೆಗೆ ಭಾರತದ ಪ್ರಗತಿ, ಆರ್ಥಿಕ, ಸಾಮಾಜಿಕ, ಪ್ರಗತಿಯ ಜೊತೆಗೆ ವಿಶ್ವ ಮಾನ್ಯ ಭಾರತವನ್ನು ರೂಪಿಸಿರುವ ನಾಯಕರು ಎಂದರು.

ಸತ್ಯವನ್ನು ಜನರಿಗೆ ತಿಳಿಸಬೇಕು
ಅತ್ಯಂತ ಸಂಘಟಿತರಾದ ಕಾರ್ಯಕರ್ತರ ಪಡೆಯನ್ನು ಪಕ್ಷ ಹೊಂದಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನಪರವಾದ ಕಾರ್ಯಕ್ರಮಗಳನ್ನು ರೂಪಸಿ, ಅನುಷ್ಠಾನಕ್ಕೆ ತಂದಿದೆ. ಸ್ಮಾರ್ಟ್ ಸಿಟಿ ಯೋಜನೆಯನ್ನು ನರೇಂದ್ರ ಮೋದಿಯವರು ಜಾರಿಗೆ ತಂದರು. ಕಾಂಗ್ರೆಸ್ ಕೇಂದ್ರದಲ್ಲಿ ಆಡಳಿತ ಮಾಡಿ ಒಂದು ನಯಾ ಪೈಸೆಯನ್ನೂ ನೀಡಿಲ್ಲ. ಸುಮಾರು 500 ಕೊಟಿ ರೂ.ಗಳನ್ನು ಬೆಂಗಳೂರಿಗೆ ನರೇಂದ್ರ ಮೋದಿಯವರು ನೀಡಿದ್ದಾರೆ. ಬೆಂಗಳೂರಿನ ಶಿವಾಜಿನಗರ, ಭಾರತಿನಗರ, ಗಾಂದಿನಗರ, ಚಿಕ್ಕಪೇಟೆ ಇದೇ ಪ್ರದೇಶಗಳಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನಗೊಂಡಿದೆ. ಇಲ್ಲಿಯ ಶಾಸಕರು ಈ ಕಾರ್ಯಕ್ರಮಗಳನ್ನು ನಾವೇ ಮಾಡಿದ್ದು ಎನ್ನುತ್ತಿದ್ದಾರೆ. ಈ ಸತ್ಯವನ್ನು ಜನರಿಗೆ ತಿಳಿಸಬೇಕು. ಸ್ಮಾರ್ಟ್ ಸಿಟಿಯಲ್ಲಿ ಆಗಿರುವ ಕೆಲಸ ಕೇವಲ ಬಿಜೆಪಿಯಿಂದಾಗಿದೆ. ಕಾಂಗ್ರೆಸ್ ಲಾಭ ಮಾಡಿಕೊಳ್ಳುವುದನ್ನು ಬಿಟ್ಟರೆ ಏನೂ ಮಾಡಿಲ್ಲ. 75 ವರ್ಷದಲ್ಲಿ 65 ವರ್ಷ ಕಾಂಗ್ರೆಸ್ ಆಡಳಿತ ಮಾಡಿದೆ. ಇಷ್ಟು ವರ್ಷ ಯಾಕೆ ಮಾಡಿಲ್ಲ. ಶಿವಾಜಿನಗರ ಕ್ಷೇತ್ರವನ್ನು ಒಂದು ಕೊಳಚೆ ಪ್ರದೇಶವಾಗಿ ಇಟ್ಟುಕೊಂಡಿದ್ದರು. ನಮ್ಮ ಸರ್ಕಾರ ಬಂದ ನಂತರ ಸುತ್ತಲಿನ ಕ್ಷೇತ್ರಗಳ ಅಭಿವೃದ್ಧಿಯಾಗುತ್ತಿದೆ. ಬೆಂಗಳೂರಿಗೆ ಎಂಟು ಸಾವಿರ ಕೋಟಿ ಅನುದಾನ ನಗರೋತ್ಥಾಕ್ಕೆ ನೀಡಿದೆ. 2 ಸಾವಿರ ಕೋಟಿ ರೂ.ಗಳನ್ನು ರಾಜಕಾಲುವೆ, ಗಾರ್ಡನ್ ಗಳಿಗೆ, ರಸ್ತೆಗಳಿಗೆ ದೊಡ್ಡ ಪ್ರಮಾಣದ ಅನುದಾನ ನೀಡಿದೆ ಎಂದರು.

*ಕಾಲೇಜಿನಲ್ಲಿಯೇ ವಿದ್ಯಾರ್ಥಿಯಿಂದ ವಿದ್ಯಾರ್ಥಿನಿಯ ಬರ್ಬರ ಹತ್ಯೆ*

https://pragati.taskdun.com/college-studentmurderloverbangalore/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button