Karnataka News

ರೈಲ್ವೇ ಹಳಿ ಮೇಲೆ ಮೂವರ ಮೃತದೇಹ ಪತ್ತೆ

ಪ್ರಗತಿ ವಾಹಿನಿ ಸುದ್ದಿ, ಗೌರಿಬಿದನೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ‌ ತೊಂಡೆಭಾವಿ ರೈಲ್ವೆ ನಿಲ್ದಾಣ‌ದ ಸಮೀಪ‌ ಹಳಿ ಮೇಲೆ ಛಿದ್ರಗೊಂಡ ರೀತಿಯಲ್ಲಿ ಮೂವರ ಮೃತದೇಹಗಳು ಪತ್ತೆಯಾಗಿದ್ದು ಒಂದೇ ಕುಟುಂಬದವರಾಗಿರುವ ಶಂಕೆ ವ್ಯಕ್ತವಾಗಿದೆ.
ಸುಮಾರು 45 ವರ್ಷದ ಪುರುಷ ಹಾಗೂ  25 ವರ್ಷದ ಇಬ್ಬರು ಮಹಿಳೆಯರ ಮೃತದೇಹಗಳು ಪತ್ತೆಯಾಗಿದೆ. ಮೃತ ವ್ಯಕ್ತಿಯ ಶರ್ಟ್ ಮೇಲೆ ವಿನಾಯಕ ಟೈಲರ್ ಗೌರಿಬಿದನೂರು ಎಂಬ ಗುರುತಿದೆ. ಒಂದೇ ಕುಟುಂಬದ ಸದಸ್ಯರಾಗಿರುವ ಅನುಮಾನವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.
ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಮಂಚೇನಹಳ್ಳಿ ಠಾಣೆಯ‌ ಪೊಲೀಸರು ಹಾಗೂ‌ ರೈಲ್ವೆ ಇಲಾಖೆಯ‌ ಪೊಲೀಸರು ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತ‌ದೇಹಗಳನ್ನು ಶವಾಗಾರಕ್ಕೆ ರವಾನಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಮೂವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
https://pragati.taskdun.com/atempt-to-murder-casewoman-accused-sentenced-for-5-years-jail/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button