
ಪ್ರಗತಿವಾಹಿನಿ ಸುದ್ದಿ, ಹೊಸದಿಲ್ಲಿ: ವೋಟಿಗಾಗಿ ನೋಟು ಹಂಚುವ ಚಾಳಿ ಇತ್ತೀಚಿನ ಚುನಾವಣೆಗಳಲ್ಲಿ ಹೆಚ್ಚುತ್ತಿರುವ ಬಗ್ಗೆ ಭಾರತದ ಚುನಾವಣಾ ಆಯೋಗ (ಇಸಿಐ) ತೀವ್ರ ಕಳವಳ ವ್ಯಕ್ತಪಡಿಸಿದೆ.
ಈ ಕುರಿತು ಸುಪ್ರೀಂಕೋರ್ಟ್ಗೆ ಮಾಹಿತಿ ನೀಡಿರುವ ಆಯೋಗ ಈ ಚಾಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ವ್ಯವಸ್ಥೆ ಜಾರಿಗೊಳಿಸಿರುವುದಾಗಿ ಹೇಳಿದೆ.
ಚುನಾವಣೆಗಳಲ್ಲಿ ಹಣಬಲದ ಪ್ರಭಾವ ಹೆಚ್ಚುತ್ತಿರುವುದನ್ನು ಆಯೋಗ ಗಂಭೀರವಾಗಿ ಪರಿಗಣಿಸಿದೆ ಎಂದು ಸುಪ್ರೀಂಕೋರ್ಟ್ಗೆ ಸಲ್ಲಿಸಿದ ಅಫಿಡಾವಿಟ್ನಲ್ಲಿ ತಿಳಿಸಲಾಗಿದೆ. ಚುನಾವಣೆ ವೇಳೆ ಅಭ್ಯರ್ಥಿಗಳು ಅಧಿಕ ವೆಚ್ಚಮಾಡುವ ಪ್ರವೃತ್ತಿ ತಡೆಯಲು ಸಮಗ್ರ ಕ್ರಿಯಾಯೋಜನೆ ರೂಪಿಸಲು ಆದೇಶಿಸುವಂತೆ ಕೋರಿ ಐಐಟಿ ಪದವೀಧರ ಪ್ರಭಾಕರ್ ದೇಶಪಾಂಡೆ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಸಂಬಂಧ ಚುನಾವಣಾ ಆಯೋಗ ಅಫಿಡವಿಟ್ ಸಲ್ಲಿಸಿದೆ.
2019ರಲ್ಲಿ ದೆಹಲಿಯ ಸೆಂಟರ್ ಫಾರ್ ಮೀಡಿಯಾ ಸ್ಟಡೀಸ್ ಬಿಡುಗಡೆ ಮಾಡಿರುವ ವರದಿಯ ಪ್ರಕಾರ, ಕಾನೂನು ಮಿತಿಯಲ್ಲಿ ನಿಗದಿಪಡಿಸಿದ್ದಕ್ಕಿಂತ ಅಧಿಕ ಮೊತ್ತವನ್ನು ಅಭ್ಯರ್ಥಿಗಳನ್ನು ಬಳಸಲಾಗುತ್ತಿದೆ ಎಂದು ನೀಡಿದ ವರದಿಯನ್ನಾಧರಿಸಿ ದೇಶಪಾಂಡೆ ಅವರು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ದಾಖಲಿಸಿದ್ದರು.
ಚುನಾವಣಾ ವೆಚ್ಚದ ಮೇಲೆ ನಿಗಾ ಇಡುವ ವ್ಯವಸ್ಥೆಯನ್ನು 2010ರ ಬಿಹಾರ ವಿಧಾನಸಭಾ ಚುನಾವಣೆ ಬಳಿಕ ಆರಂಭಿಸಿದ್ದಾಗಿಯೂ ಚುನಾವಣಾ ಆಯೋಗ ಹೇಳಿಕೊಂಡಿದೆ.
ಚುನಾವಣೆಗಳಿಗೆ ಮತ್ತು ಪ್ರಜಾಸತ್ತಾತ್ಮಕ ಪ್ರಕ್ರಿಯೆಗೆ ವಿಶ್ವಾಸಾರ್ಹತೆಯನ್ನು ತರಲು ಚುನಾವಣಾ ಆಯೋಗ ಅಧಿಕ ವೆಚ್ಚವನ್ನು ತಡೆಯಲು ಸಮಗ್ರ ಕ್ರಿಯಾಯೋಜನೆ ರೂಪಿಸಬೇಕು, ಮತ್ತು ಮಿತಿ ಮೀರಿ ವೆಚ್ಚ ಮಾಡುವ ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯಲ್ಲಿ ಕೋರಲಾಗಿತ್ತು.
ಈ ಸಂಬಂಧ ಈಗಾಗಲೇ ಆಯೋಗ ನಿಯಂತ್ರಣ ವ್ಯವಸ್ಥೆ ಹೊಂದಿರುವ ಹಿನ್ನೆಲೆಯಲ್ಲಿ ಈ ಅರ್ಜಿ ವಜಾಗೊಳಿಸುವಂತೆ ಚುನಾವಣಾ ಆಯೋಗ ಕೋರಿದೆ. ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ ಮತ್ತು ಬೇಲಾ ಎಂ. ತ್ರಿವೇದಿಯವರನ್ನು ಒಳಗೊಂಡ ಪೀಠ ಈ ಅರ್ಜಿಯ ವಿಚಾರಣೆ ನಡೆಸುತ್ತಿದೆ. ಕಳೆದ ಸೆಪ್ಟೆಂಬರ್ನಲ್ಲಿ ಈ ಅರ್ಜಿಯ ಸಂಬಂಧ ಸುಪ್ರೀಂಕೋರ್ಟ್, ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿತ್ತು.
*ಕೆಎಂಸಿ ಸರ್ಜನ್ ಡಾ.ಬಾಲಾಜಿ ಅರೆಸ್ಟ್*
https://pragati.taskdun.com/drugsganja-casemangalore-kmc-doctordr-balajiarrested/
ಸುಳ್ಳು ಸುದ್ದಿ ಕಳ್ಳಾಟಕ್ಕೆ ದಂಡ ತೆತ್ತ ಯೂಟ್ಯೂಬ್ ಚಾನೆಲ್ ಗಳು
https://pragati.taskdun.com/6-youtube-channels-banned-for-spreading-fake-news/
ಸಂಪೂರ್ಣ ಮುಳುಗಡೆ ಹಂತದಲ್ಲಿದೆ ಜ್ಯೋತಿರ್ಲಿಂಗದ ತಾಣ ಜೋಶಿಮಠ
https://pragati.taskdun.com/joshimath-the-site-of-jyotirlinga-is-under-complete-submergence/