Latest

*ಬಸವಣ್ಣ ಹಾಗೂ ಕೆಂಪೇಗೌಡರ ಚಿಂತನೆ ನಾಡಿನಲ್ಲಿ ಹರಿಯಬೇಕು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜಗಜ್ಯೋತಿ ಬಸವಣ್ಣ ಹಾಗೂ ನಾಡಪ್ರಭು ಕೆಂಪೇಗೌಡರ ಚಿಂತನೆ ನಾಡಿನಲ್ಲಿ ಹರಿಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ವಿಧಾನಸಧದ ಮುಂಭಾಗದಲ್ಲಿ ಶ್ರೀ ಜಗಜ್ಯೋತಿ ಬಸವೇಶ್ವರ ಮತ್ತು ನಾಡಪ್ರಭು ಕೆಂಪೇಗೌಡರ ಪುತ್ಥಳಿ ನಿರ್ಮಾಣ ಕಾಮಗಾರಿಯ ಭೂಮಿ ಪೂಜಾ ಕಾರ್ಯವನ್ನು ನೆರವೇರಿಸಿ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ಈ ಇಬ್ಬರೂ ಮಹಾನ್ ಪುರುಷರ ಆಡಳಿತ ಮತ್ತು ಆಧ್ಯಾತ್ಮಿಕ ಚಿಂತನೆ ನಮ್ಮ ನಾಡಿನಲ್ಲಿ ಬರಬೇಕು. ಈ ಶಕ್ತಿ ಸೌಧದಿಂದ ಅದು ಹರಿಯಬೇಕು. ಆ ವಿಚಾರಗಳು ಹರಿದು ಕರ್ನಾಟಕ ಸಮಗ್ರವಾಗಿ ಅಭಿವೃದ್ಧಿಯಾಗಿರುವ, ಸಾಮರಸ್ಯವಿರುವ, ಭಾರತದಲ್ಲಿಯೇ ಅತ್ಯಂತ ಶ್ರೇಷ್ಠ ರಾಜ್ಯವಾಗಬೇಕು. ಈ ಇಬ್ಬರೂ ಮಹಾತ್ಮರ ಪ್ರೇರಣೆ ವಿಧಾನಸೌಧದಲ್ಲಿ ನಿಲ್ಲಲಿ ಎಂದು ಪ್ರತಿಮೆಗಳನ್ನು ಸ್ಥಾಪಿಸಲಾಗಿದೆ ಎಂದರು.

ನವ ಕರ್ನಾಟಕ ನಿರ್ಮಾಣಕ್ಕೆ ಭದ್ರ ಬುನಾದಿ
ಬರುವ ದಿನಗಳಲ್ಲಿ ನಾಡಿನ ಜನತೆಗೆ ಒಳ್ಳೆಯದಾಗಿ ನವ ಕರ್ನಾಟಕ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಲಾಗಿದೆ ಇಂದಿನಿಂದ ಈ ಕೆಲಸ ಪ್ರಾರಂಭವಾಗಿದೆ. ಇನ್ನೆರಡು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಂಡು ಎಲ್ಲರೂ ಸೇರಿ ಉದ್ಘಾಟನೆ ಮಾಡೋಣ ಎಂದರು. ಕನ್ನಡ ನಾಡಿಗೆ ಇದೊಂದು ಶುಭದಿನ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.

ನಾಡು ಕಟ್ಟಿರುವ ಅಪ್ರತಿಮ ನಾಯಕರು
ಕನ್ನಡನಾಡಿನಲ್ಲಿ ಹುಟ್ಟಿ, ಕ್ರಾಂತಿಯನ್ನು ಮಾಡಿದ ಇಬ್ಬರು ಮಹಾನ್ ಪುರುಷರು. ಒಬ್ಬರು ವಿಶ್ವಬಂಧು, ಸಾಮಾಜಿಕ, ಆರ್ಥಿಕ ಹಾಗೂ ವೈಚಾರಿಕ ಕ್ರಾಂತಿಯನ್ನು ಕರ್ನಾಟಕದಲ್ಲಿ 12 ನೇ ಶತಮಾನದಲ್ಲಿ ಮಾಡಿ ಜಗತ್ತಿಗೆ ದರ್ಶನವನ್ನು ನೀಡಿರುವವರ ಪುತ್ಥಳಿ ಹಾಗೂ ನಾಡು ಕಟ್ಟಿರುವ ಅಪ್ರತಿಮ ನಾಯಕರು, ಜನಹಿತಕ್ಕಾಗಿ ಕರಕಟ್ಟೆಗಳು, ಊರು ಕೇರಿಗಳನ್ನು, ಮಾರುಕಟ್ಟೆಗಳನ್ನು ಕಟ್ಟಿ ಮಾದರಿ ಆಡಳಿತ ಮಾಡಿರುವ ನಾಡಪ್ರಭು ಕೆಂಪೇಗೌಡರ ಪುತ್ಥಳಿಯನ್ನು ವಿಧಾನಸಭಾ ಮುಂಭಾಗದಲ್ಲಿ ನಿರ್ಮಿಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಿ, ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರು, ಎಲ್ಲಾ ನಾಯಕರ ಅನುಮತಿ ಪಡೆದು, ಸಚಿವ ಆರ್. ಅಶೋಕ್ ಅವರಿಗೆ ಜವಾಬ್ದಾರಿ ನೀಡಲಾಗಿತ್ತು. ಅಶೋಕ್ ಅವರು ಅತ್ಯಂತ ಅಚ್ಚುಕಟ್ಟಾಗಿ ಜವಾಬ್ದಾರಿಯನ್ನು ನಿರ್ವಹಿಸಿ, ಕೇವಲ ಒಂದೂವರೆ ಎರಡು ತಿಂಗಳೊಳಗೆ ಕಾರ್ಯನಿರ್ವಹಿಸಿ ಕ್ರಮ ಕೈಗೊಂಡಿದ್ದಾರೆ. ನಾಡಿನ ಎಲ್ಲಾ ಪರಮಪೂಜ್ಯರ ಸಾನಿಧ್ಯದಲ್ಲಿ, ಅವರ ಆಶೀರ್ವಾದದೊಂದಿಗೆ ಒಂದು ಶಂಕುಸ್ಥಾಪನೆ ನೆರವೇರಿದೆ ಎಂದರು.

*ಕಾಂಗ್ರೆಸ್ ನವರದ್ದು ಓಡುವ ಬಸ್ ಅಲ್ಲ; ದೂಡುವ ಬಸ್; ಪ್ರಜಾಧ್ವನಿ ಯಾತ್ರೆ ಶೋಕ ಯಾತ್ರೆ; ಬಿಜೆಪಿ ನಾಯಕರ ವಾಗ್ದಾಳಿ*

https://pragati.taskdun.com/prajadhwani-bus-yatrecongressaswaththnarayanap-rajeev/

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button