Latest
*ಸ್ಯಾಂಟ್ರೋ ರವಿ ಸಿಐಡಿ ಕಸ್ಟಡಿಗೆ; ತನಿಖೆ ಮತ್ತಷ್ಟು ಚುರುಕು*

ಪ್ರಗತಿವಾಹಿನಿ ಸುದ್ದಿ; ಮೈಸೂರು: ಸ್ಯಾಂಟ್ರೋ ರವಿ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವರ್ಗಾವಣೆ ಮಾಡಿದ ಬೆನ್ನಲ್ಲೇ ಕಾರ್ಯಾಚರಣೆ ನಡೆಸಿದ ಸಿಐಡಿ ಪೊಲೀಸರು, ಆರೋಪಿಯನ್ನು ಕೋರ್ಟ್ಗೆ ಹಾಜರುಪಡಿಸಿ ವಶಕ್ಕೆ ಪಡೆದಿದ್ದಾರೆ.
ಮೈಸೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ಸ್ಯಾಂಟ್ರೋ ರವಿಯನ್ನು ಜನವರಿ 30ರವರೆಗೆ ಸಿಐಡಿ ಕಸ್ಟಡಿಗೆ ವಹಿಸಿ ಆದೇಶ ನೀಡಲಾಗಿದೆ.
ಸಿಐಡಿ ವಶಕ್ಕೆ ಪಡೆದ ಬಳಿಕ ಡಿವೈಎಸ್ಪಿ ನರಸಿಂಹ ಮೂರ್ತಿ ನೇತೃತ್ವದಲ್ಲಿ ಸಿಐಡಿ ಅಧಿಕಾರಿಗಳ ತಂಡ ನಗರ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ಬಳಿಕ ವಿಜಯ ನಗರ ಪೊಲೀಸ್ ಠಾಣೆಗೆ ತೆರಳಿ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದರು.
*ಪುಟ್ಟ ಮಕ್ಕಳಿಗೆ ವಿಷವುಣಿಸಿ ತಾಯಿ ಆತ್ಮಹತ್ಯೆ*
https://pragati.taskdun.com/mothertwo-childrensuicidebidar/




