LatestUncategorized

*ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡು ದಂಪತಿ ಆತ್ಮಹತ್ಯೆಗೆ ಯತ್ನ*

ಪ್ರಗತಿವಾಹಿನಿ ಸುದ್ದಿ; ಚಿಕ್ಕಬಳ್ಳಾಪುರ: ಇಬ್ಬರು ಮಕ್ಕಳೊಂದಿಗೆ ದಂಪತಿ ಆತ್ಮಹತ್ಯೆಗೆ ಯತ್ನಿಸಿದ್ದು, ಪತ್ನಿ ಹಾಗೂ ಮಕ್ಕಳು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ತಾಲೂಕಿನ ಹೆಣ್ಣೂರು ಗ್ರಾಮದಲ್ಲಿ ನಡೆದಿದೆ.

ನೇತ್ರಾವತಿ (37) ಹಾಗೂ ಮಕ್ಕಳಾದ ವರ್ಷಿತಾ (12), ಸ್ನೇಹಾ (9) ಮೃತರು. ಪತಿ ಸೊನ್ನೇಗೌಡ ಸ್ಥಿತಿ ಗಂಭೀರವಾಗಿದೆ. ಪತಿ-ಪತಿ ಇಬ್ಬರೂ ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪತ್ನಿ ಹಾಗೂ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಪತಿ ಸೊನ್ನೇಗೌಡಗೆ ತೀವ್ರತರವಾದ ಸುಟ್ಟಗಾಯಗಳಾಗಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದಾರೆ.

ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದಂಪತಿ ಆತ್ಮಹತ್ಯೆ ಯತ್ನ ಯತ್ನಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಹೆಣ್ಣೂರು ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

*ಐಪಿಎಸ್ ರೂಪಾ V/S ಐಎಎಸ್ ರೋಹಿಣಿ ವಿವಾದಕ್ಕೆ ಕಾರಣ ಬಹಿರಂಗ ; ಆಡಿಯೋ ವೈರಲ್*

Home add -Advt

https://pragati.taskdun.com/d-rooparohini-sindhurigangarajaudio-viral/

Related Articles

Back to top button