Kannada NewsLatestUncategorized

*ಬೆಳಗಾವಿ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಅಗತ್ಯವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಹೆಣ್ಣು ಮಕ್ಕಳು ಹೈರಾಣಾಗಿದ್ದಾರೆ. ಎಲ್ ಪಿಜಿ ಸಿಲಿಂಡರ್ ದರವನ್ನು ಮತ್ತೆ 50 ರೂಪಾಯಿ ಹೆಚ್ಚಳ ಮಾಡಿದ್ದಾರೆ ಇದೇನಾ ಅಚ್ಚೇ ದಿನ್ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬೆಳಗಾವಿಯ ಪಂಥಬಾಳೆಕುಂದ್ರಿಯಲ್ಲಿ ನಡೆದ ಕಾಂಗ್ರೆಸ್ ಪ್ರಜಾಧ್ವನಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ರೈತರ ರಕ್ತ ಹೀರಿ, ಸುಲಿಗೆ ಮಾಡಿ 6 ಸಾವಿರ ಕೊಟ್ಟಿದ್ದೇವೆ ಎಂದು ಹೇಳುತ್ತಾ ಸುಳ್ಳು ಹೇಳಿಕೊಂಡು ತಿರುಗಾಡುತ್ತಿದ್ದಾರೆ.

ಪ್ರಧಾನಿ ಮೋದಿಯವರೇ, ಮಜ್ಜಿಗೆ ಮೇಲೆ, ಪೆನ್ಸಿಲ್ ಮೇಲೆ, ಗೊಬ್ಬರದ ಮೇಲೆ ತೆರಿಗೆ ಬರೆ ಹಾಕಿ ರೈತರ ರಕ್ತ ಕುಡಿಯುತ್ತಿದ್ದೀರಿ ನೀವು. ನಾಲ್ಕುವರೆ ಲಕ್ಷ ಕೋಟಿ ಕರ್ನಾಟಕದ ಜನರಿಂದ ಸುಲಿಗೆ ಮಾಡುತ್ತಿದ್ದೀರಿ ನೀವು. ನಮಗೆ ವಾಪಸ್ ಕೊಡುವುದು ಬರೀ 50 ಸಾವಿರ ಕೋಟಿ. ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯ ಸರ್ಕಾರಕ್ಕೆ ಕೊಡುವ ಅನುದಾನ ಕಡಿಮೆಯಾಗಿದೆ ಎಂದು ಕಿಡಿಕಾರಿದ್ದಾರೆ.

*ಸರ್ಕಾರಿ ನೌಕರರ ಸಂಘದ ನಡುವೆಯೇ ಬಣ ಬಡಿದಾಟ; ಷಡಕ್ಷರಿ ವಿರುದ್ಧ ಗುರುಸ್ವಾಮಿ ವಾಗ್ದಾಳಿ*

https://pragati.taskdun.com/7th-pay-commissiongovt-employeesc-s-shadakshariguruswamy/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button